
ಪುಣೆ(ಏ.28): ದೇಸಿ ಕ್ರಿಕೆಟ್'ನಲ್ಲಿ ಸಾಧಾರಣ ಪ್ರದರ್ಶನ ತೋರಿದ್ದ ಕರ್ನಾಟಕದ ರಾಬಿನ್ ಉತ್ತಪ್ಪ, ಪ್ರಸಕ್ತ ಆವೃತ್ತಿಯ ಐಪಿಎಲ್'ನಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸುವ ಮೂಲಕ ತಮ್ಮಲ್ಲಿನ್ನೂ ಸಾಕಷ್ಟು ಕ್ರಿಕೆಟ್ ಬಾಕಿ ಇದೆ ಎಂಬುದನ್ನು ಸಾಬೀತು ಪಡಿಸುತ್ತಿದ್ದಾರೆ.
ಇದೇ ಲಯವನ್ನು ಮುಂದುವರಿಸುವ ಮೂಲಕ ಮತ್ತೆ ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ‘‘ನಿವೃತ್ತಿಗೂ ಮುನ್ನ ಭಾರತ ಪರ ಟೆಸ್ಟ್ ಆಡುವ ಕನಸಿದೆ. ಕಠಿಣ ಪರಿಶ್ರಮ ಎಂದಿಗೂ ವ್ಯರ್ಥವಾಗುವುದಿಲ್ಲ ಎಂಬುದು ನನ್ನ ನಂಬಿಕೆಯಾಗಿದೆ. ನನ್ನ ವೃತ್ತಿಬದುಕಿನಲ್ಲಿ ಮತ್ತೊಂದು ತಿರುವು ದೊರೆಯಲಿದೆ ಎಂಬ ಬಲವಾದ ನಂಬಿಕೆಯಿದೆ'' ಎಂದು ಅವರು ಹೇಳಿದ್ದಾರೆ.
ಪ್ರಸ್ತುತ ಐಪಿಎಲ್'ನಲ್ಲಿ ಕೋಲ್ಕತ ನೈಟ್'ರೈಡರ್ಸ್ ಪರ ವಿಕೆಟ್ ಕೀಪರ್ ಬ್ಯಾಟ್ಸ್'ಮನ್ ಆಗಿ ಕಾಣಿಸಿಕೊಳ್ಳುತ್ತಿರುವ ಕನ್ನಡದ ಕಲಿ ರಾಬಿನ್ ಉತ್ತಪ್ಪ, ತಾವಾಡಿದ ಒಂಬತ್ತು ಪಂದ್ಯಗಳಿಂದ ನಾ ಅರ್ಧಶತಕ ಸೇರಿದಂತೆ 331ರನ್ ಬಾರಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.