
ನವದೆಹಲಿ(ಡಿ.14): ಬಾರ್ & ರೆಸ್ಟೋರೆಂಟ್'ವೊಂದಕ್ಕೆ ತಮ್ಮ ಹೆಸರಿಟ್ಟಿದ್ದು, ಪ್ರಶ್ನಿಸಿ ಹಿರಿಯ ಕ್ರಿಕೆಟಿಗ ಗೌತಮ್ ಗಂಭೀರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ದೆಹಲಿಯ ಗುರ್'ಗಾಂವ್ ಹಾಗೂ ಹವ್ಲಾಟ್'ನಲ್ಲಿ ಡಿಎಪಿ ಅಂಡ್ ಕಂಪನಿಯವರು ಗೌತಮ್ ಗಂಭೀರ್ ಹೆಸರಿನಲ್ಲಿ ಬಾರ್ ನಡೆಸುತ್ತಿವೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಇದು ಜನರಿಗೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ ಎಂದು ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್'ಪಿ ಗರ್ಗ್ ಬಾರ್ ಮಾಲೀಕರ ಹೆಸರೂ ಕೂಡಾ ಗೌತಮ್ ಗಂಭೀರ್ ಆಗಿರುವುದರಿಂದ ಅದೇ ಹೆಸರಿಟ್ಟಿರುವುದಾಗಿ ಬಾರ್ ಮಾಲೀಕರ ಪರ ವಕೀಲರು ವಾದಿಸಿದ್ದರು. ಹೀಗಾಗಿ ಗಂಭೀರ್ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.