
ಕರಾಚಿ(ಫೆ.06): ಕಳೆದ ಕೆಲ ವರ್ಷಗಳಿಂದ ಬಗೆಹರಿಯದೇ ಉಳಿದಿರುವ ಕಾಶ್ಮೀರ ಸಮಸ್ಯೆಯಿಂದಾಗಿ ಅಪಾರ ಹಾನಿ ಉಂಟಾಗಿದೆ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹೀದ್ ಅಫ್ರಿದಿ ಸಾಮಾಜಿಕ ಜಾಲತಾಣವಾದ ಟ್ವಿಟರ್ನಲ್ಲಿ ಹತಾಶೆ ವ್ಯಕ್ತಪಡಿಸಿದ್ದಾರೆ.
ಕಾಶ್ಮೀರ ಪ್ರದೇಶವನ್ನು ಸ್ವತಂತ್ರವಾಗಿ ಪಡೆಯುವುದಕ್ಕಾಗಿ ಉಭಯ ರಾಷ್ಟ್ರಗಳಾದ ಭಾರತ ಮತ್ತು ಪಾಕಿಸ್ತಾನ ಆಗಿಂದಾಗ್ಗೆ ಯುದ್ಧ ನಡೆಸುತ್ತಿವೆ. 1965, 1971 ಹಾಗೂ 1999ರಲ್ಲಿ ಎರಡು ದೇಶಗಳು ಯುದ್ಧ ನಡೆಸಿವೆ.\
ಈ ಭಾಗದಲ್ಲಿ ನಡೆಯುವ ಉಗ್ರ ಚಟುವಟಿಕೆಯಿಂದಾಗಿ ಸಾಕಷ್ಟು ನಷ್ಟ ಉಂಟಾಗಿದೆ. ಹಾಗೆ ಇಲ್ಲಿಯವರೆಗೂ ಕಾಶ್ಮೀರ ಸಮಸ್ಯೆ ಇತ್ಯರ್ಥವಾಗಿಲ್ಲದೇ ಇರುವುದು ಅತೀವ ಬೇಸರ ತರಿಸಿದೆ ಎಂದು ಅಫ್ರಿದಿ ಟ್ವಿಟರ್ನಲ್ಲಿ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.