
ಬೆಂಗಳೂರು(ಆ.09): ಮಹಿಳಾ ವಿಶ್ವಕಪ್ ಆಡಿದ್ದ ಭಾರತ ತಂಡದ ಆಟಗಾರ್ತಿಯರಾದ ವೇದಾ ಕೃಷ್ಣಮೂರ್ತಿ ಮತ್ತು ರಾಜೇಶ್ವರಿ ಗಾಯಕ್ವಾಡ್ ಅವರನ್ನ ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ,ಇಬ್ಬರು ಆಟಗಾರ್ತಿಯರಿಗೆ ಮೈಸೂರು ಪೇಟ ತೊಡಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿತು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸರಳ ಸಮಾರಂಭದಲ್ಲಿ ಇಬ್ಬರಿಗೂ ತಲಾ 5 ಲಕ್ಷ ರೂಪಾಯಿ ಬಹುಮಾನ ಮೊತ್ತವನ್ನ ನೀಡಲಾಯಿತು. ಇಂಗ್ಲೆಂಡ್ನಲ್ಲಿ ನಡೆದ ಮಹಿಳಾ ವರ್ಲ್ಡ್ಕಪ್ನಲ್ಲಿ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿತ್ತು. ಮುಂದಿನ ವರ್ಷ ಟಿ20 ವಿಶ್ವಕಪ್ ಮೇಲೆ ಇಬ್ಬರು ಆಟಗಾರ್ತಿಯರು ಕಣ್ಣಿಟ್ಟಿರುವುದಾಗಿ ಇಬ್ಬರು ಆಟಗಾರ್ತಿಯರು ಹೇಳಿಕೊಂಡ್ರು. ಜೊತೆಗೆ ರಾಜ್ಯ ಸಂಸ್ಥೆ ಗೌರವಿಸಿದಕ್ಕೆ ಸಂತಸ ವ್ಯಕ್ತಪಡಿಸಿದ್ರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.