
ಚಂಢೀಗಡ(ಮಾ.06): ಏಷ್ಯಾ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದು ಈ ಸಾಧನೆ ಮಾಡಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎನ್ನುವ ದಾಖಲೆ ಬರೆದ ನವ್ಜೋತ್ ಕೌರ್ ಅವರಿಗೆ ಪಂಜಾಬ್ ಸರ್ಕಾರ ಡಿಎಸ್ಪಿ ಹುದ್ದೆ ನೀಡಿ ಗೌರವಿಸುವ ಬಗ್ಗೆ ವಿಶ್ವಾಸ ಹೊಂದಿದ್ದಾರೆ.
ಸ್ವತಃ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೌರ್ ಅವರು ಸಿಎಂ ಅಮರೇಂದರ್ ಸಿಂಗ್ ಅವರು ನನ್ನಸಾಧನೆಯ ಬಗ್ಗೆ ಗೌರವಿಸಿದ್ದು ಪಂಜಾಬ್ ಸರ್ಕಾರ ತಮಗೆ ಡಿಎಸ್'ಪಿ ಹುದ್ದೆ ನೀಡುವ ಬಗ್ಗೆ ತಮಗೆ ಭರವಸೆಯಿದೆ. ತಾವು ಆ ವಕಾಶಕ್ಕಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.
ಪಂಜಾಬ್ ಸರ್ಕಾರ್ ನವ್ಜೋತ್ಗೆ ಪೊಲೀಸ್ ಇಲಾಖೆಯಲ್ಲಿ ಡಿಎಸ್ಪಿ ಹುದ್ದೆ ನೀಡಿ ಗೌರವಿಸಬೇಕು ಎಂದು ಸ್ಥಳೀಯ ರಾಜಕೀಯ ಪಕ್ಷ ಅಕಾಲಿ ದಳ ಆಗ್ರಹಿಸಿದೆ. ಸದ್ಯ ನವ್ಜೋತ್ ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.