ಟೀಂ ಇಂಡಿಯಾದಲ್ಲಿ ಮುಸ್ಲಿಮರೇಕಿಲ್ಲ...? ಮಾಜಿ ಪೊಲೀಸಪ್ಪನಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರಕೊಟ್ಟ ಭಜ್ಜಿ

Published : Oct 24, 2017, 07:49 PM ISTUpdated : Apr 11, 2018, 12:39 PM IST
ಟೀಂ ಇಂಡಿಯಾದಲ್ಲಿ ಮುಸ್ಲಿಮರೇಕಿಲ್ಲ...? ಮಾಜಿ ಪೊಲೀಸಪ್ಪನಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರಕೊಟ್ಟ ಭಜ್ಜಿ

ಸಾರಾಂಶ

ಸಂಜೀವ್ ಭಟ್ ತಮ್ಮ ಟ್ವೀಟ್'ನಲ್ಲಿ, ಪ್ರಸ್ತುತ ಟೀಂ ಇಂಡಿಯಾದಲ್ಲಿ ಯಾರಾದರೂ ಮುಸ್ಲಿಂ ಆಟಗಾರರಿದ್ದಾರೆಯೇ? ಸ್ವಾತಂತ್ರ್ಯ ನಂತರ ಇಲ್ಲಿಯವರೆಗೆ ಭಾರತ ಕ್ರಿಕೆಟ್'ನಲ್ಲಿ ಎಷ್ಟೊಂದು ಬಾರಿ ಹೀಗಾಗಿದೆ ಎಂದು ವಿವಾದಾತ್ಮಕ ಟ್ವೀಟ್ ಮಾಡಿದ್ದರು.

ಮುಂಬೈ(ಅ.24): ಅವಶ್ಯಕತೆ ಬಿದ್ದಾಗ ಟ್ವಿಟರ್'ನಲ್ಲಿ ಪ್ರತಿಕ್ರಿಯಿಸುವ ಟೀಂ ಇಂಡಿಯಾ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಪ್ರಖರವಾದ ಮಾತುಗಳ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಹೌದು, ಗುಜರಾತ್'ನ ಹಿರಿಯ ಮಾಜಿ ಪೊಲೀಸ್ ಅಧಿಕಾರಿ ಸಂಜೀವ್ ಭಟ್ ಭಾರತ ಕ್ರಿಕೆಟ್ ತಂಡದ ಬಗ್ಗೆ ಕೋಮು ಭಾವನೆ ಕೆರಳಿಸವಂತಹ ಟ್ವೀಟ್ ಮಾಡಿದ್ದರು, ಇದಕ್ಕೆ ಭಜ್ಜಿ ಖಡಕ್ ಆಗಿಯೇ ಉತ್ತರಿಸುವ ಮೂಲಕ ಮಾಜಿ ಪೊಲೀಸಪ್ಪನ ಬಾಯಿ ಮುಚ್ಚಿಸಿದ್ದಾರೆ.

ಸಂಜೀವ್ ಭಟ್ ತಮ್ಮ ಟ್ವೀಟ್'ನಲ್ಲಿ, ಪ್ರಸ್ತುತ ಟೀಂ ಇಂಡಿಯಾದಲ್ಲಿ ಯಾರಾದರೂ ಮುಸ್ಲಿಂ ಆಟಗಾರರಿದ್ದಾರೆಯೇ? ಸ್ವಾತಂತ್ರ್ಯ ನಂತರ ಇಲ್ಲಿಯವರೆಗೆ ಭಾರತ ಕ್ರಿಕೆಟ್'ನಲ್ಲಿ ಎಷ್ಟೊಂದು ಬಾರಿ ಹೀಗಾಗಿದೆ ಎಂದು ವಿವಾದಾತ್ಮಕ ಟ್ವೀಟ್ ಮಾಡಿದ್ದರು.

ಇದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಟರ್ಭನೇಟರ್, ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್ ಎಲ್ಲರೂ ಒಟ್ಟಿಗೆ ಇದ್ದೇವೆ. ಭಾರತ ತಂಡದಲ್ಲಿ ಆಡುವ ಪ್ರತಿಯೊಬ್ಬರೂ ಹಿಂದೂಸ್ತಾನಿಗಳೆ ಆಗಿದ್ದಾರೆ. ಇವರ ಮಧ್ಯೆ ಜಾತಿ, ಧರ್ಮಗಳನ್ನು ಎಳೆದು ತರಬೇಡಿ ಎಂದು ಟ್ವೀಟ್ ಮಾಡಿದ್ದಾರೆ.

ಈ ಮೊದಲು ಟೀಂ ಇಂಡಿಯಾದಲ್ಲಿ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್, ಇರ್ಫಾನ್ ಪಠಾಣ್, ಜಹೀರ್ ಖಾನ್, ಮೊಹಮ್ಮದ್ ಕೈಫ್ ಮುಂತಾದ ಆಟಗಾರರು ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ. ಅಲ್ಲದೇ ಹಾಲಿಯಾಗಿ ಮೊಹಮ್ಮದ್ ಶಮಿ, ಇತ್ತೀಚೆಗಷ್ಟೇ ಟೀಂ ಇಂಡಿಯಾಗೆ ಮೊಹಮ್ಮದ್ ಸಿರಾಜ್ ಕೂಡಾ ಆಯ್ಕೆ ಆಗಿರುವುದನ್ನು ಗಮನಿಸಬಹುದಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?