
ಕಲ್ಗಾರಿ(ಜು.14): ಭಾರತದ ಭರವಸೆಯ ಶಟ್ಲರ್ ಎಚ್.ಎಸ್. ಪ್ರಣಯ್, ಕೆನಡಾ ಓಪನ್ ಗ್ರ್ಯಾನ್ ಪ್ರೀ ಬ್ಯಾಡ್ಮಿಂಟನ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಪುರುಷರ ಸಿಂಗಲ್ಸ್ ಪ್ರೀ ಕ್ವಾರ್ಟರ್'ಫೈನಲ್'ನಲ್ಲಿ 21-17, 14-21, 13-21 ಗೇಮ್'ಗಳಿಂದ 9ನೇ ಶ್ರೇಯಾಂಕಿತ ಕೊರಿಯಾದ ಜಿಯೊನ್ ಜಿನ್ ಎದುರು ಪರಾಭವಗೊಂಡರು.
ಇದೇ ವೇಳೆ ಹಾಲಿ ಚಾಂಪಿಯನ್ನರಾದ ಭಾರತದ ಮನು ಅತ್ರಿ ಮತ್ತು ಬಿ. ಸುಮಿತ್ ರೆಡ್ಡಿ ಜೋಡಿ, ಪುರುಷರ ಡಬಲ್ಸ್ ಕ್ವಾರ್ಟರ್ಫೈನಲ್ ಪ್ರವೇಶಿಸಿದೆ.
ಇಂದು ನಡೆದ ಪ್ರೀ ಕ್ವಾರ್ಟರ್ ಪಂದ್ಯದಲ್ಲಿ ಮನು ಮತ್ತು ಸುಮಿತ್ ಜೋಡಿ 21-17, 17-21, 21-13 ಗೇಮ್'ಗಳಿಂದ ಕೊರಿಯಾದ ಚೊಯಿ ಸೊಲ್ಗ್ಯೂ ಮತ್ತು ಜೇ ಹ್ವಾನ್ ಕಿಮ್ ಜೋಡಿ ಎದುರು ಗೆಲುವು ಸಾಧಿಸಿತು. ಮಿಶ್ರ ಡಬಲ್ಸ್ನಲ್ಲಿ ಭಾರತದ ಪ್ರಣವ್ ಜೆರ್ರಿ ಚೋಪ್ರಾ ಹಾಗೂ ಸಿಕ್ಕಿ ರೆಡ್ಡಿ ಜೋಡಿ ಕ್ವಾರ್ಟರ್ ಫೈನಲ್ಗೇರಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.