
ಕೇಪ್'ಟೌನ್(ಡಿ.30): ಭಾರತ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ 2018 ರ ವರ್ಷವನ್ನು ಸ್ಮರಣೀಯವಾಗಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ.
ನನಗೆ ತುಂಬಾ ಆತ್ಮವಿಶ್ವಾಸವಿದೆ, 2018 ನನ್ನ ವರ್ಷವಾಗಿರಲಿದೆ. ನೂತನ ವರ್ಷ ನನ್ನ ಮುಂದೆ ಸಾಕಷ್ಟ ಸವಾಲುಗಳಿವೆ. ಸದ್ಯಕ್ಕೆ ದಕ್ಷಿಣ ಆಫ್ರಿಕಾ ಸರಣಿಯ ಮೇಲೆ ಸಾಕಷ್ಟು ಗಮನ ಹರಿಸುತ್ತಿದ್ದೇನೆ ಎಂದು ರಹಾನೆ ಹೇಳಿದ್ದಾರೆ.
ಭಾರತ ಪರ ಸಾಕಷ್ಟು ಪಂದ್ಯಗಳಲ್ಲಿ ಆಪತ್ಬಾಂದವನಾಗಿ ಗುರುತಿಸಿಕೊಂಡಿರುವ ರಹಾನೆ, ಶ್ರೀಲಂಕಾ ವಿರುದ್ಧದ 3 ಟೆಸ್ಟ್ ಪಂದ್ಯಗಳಲ್ಲಿ ಕೇವಲ 17 ರನ್ ಅಷ್ಟೇ ಬಾರಿಸಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಜೀವನವೇ ಆಗಲಿ ಕ್ರೀಡೆಯೇ ಆಗಲಿ ಏಳು-ಬೀಳುಗಳು ಸಾಮಾನ್ಯ. ನಮ್ಮ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಮೇಲೇಳಬೇಕು ಎಂದು ರಹಾನೆ ಅಭಿಪ್ರಾಯಪಟ್ಟಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.