
ನವದೆಹಲಿ(ಆ.21): ಮೂರನೇ ಬಾರಿಗೆ ಅರ್ಜುನ ಪ್ರಶಸ್ತಿ ಕೈತಪ್ಪಿದ್ದಕ್ಕೆ ಸ್ಕ್ವಾಶ್ ಆಟಗಾರ ಹರೀಂದರ್ ಪಾಲ್ ಸಂಧು ಬೇಸರ ವ್ಯಕ್ತಪಡಿಸಿದ್ದಾರೆ.
2014ರ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಸಂಧು ‘ನಾನು ಈ ಬಾರಿ ವಿಶ್ವಾಸದಿಂದಿದ್ದೆ. ಪ್ರಶಸ್ತಿ ಪಡೆಯುವ ಅರ್ಹತೆಯೂ ನನಗಿತ್ತು. ಆದರೆ ನನ್ನನ್ನು ಕಡೆಗಣಿಸಿರುವುದು ನೋವುಂಟು ಮಾಡಿದೆ’ ಎಂದು ಹೇಳಿದ್ದಾರೆ.
ನನಗೆ ಬೇರೆ ಆಯ್ಕೆಯಿಲ್ಲ. ಪ್ರಶಸ್ತಿ ವಿಜೇತರ ಹೆಸರನ್ನು ಕ್ರೀಡಾ ಇಲಾಖೆ ಪ್ರಕಟಗೊಳಿಸಿದೆ. ಮುಂದಿನ ವರ್ಷ ಮತ್ತೆ ಅರ್ಜಿ ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.
9 ಪಿಎಸ್'ಎ ಪ್ರಶಸ್ತಿಗಳನ್ನು ಗೆದ್ದಿರುವ ಸಂಧು, ಏಷ್ಯನ್ ಗೇಮ್ಸ್'ನಲ್ಲಿ ಭಾರತ ಚಿನ್ನ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.