
ದುಬೈ: ತೆರಿಗೆ ವಿನಾಯ್ತಿ ಲಭ್ಯವಾಗದಿದ್ದರೆ, 2021ರ ಚಾಂಪಿಯನ್ಸ್ ಟ್ರೋಫಿ ಸ್ಥಳಾಂತರ ಭೀತಿ ಎದುರಿಸಿದ್ದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಐಸಿಸಿ ಮತ್ತೊಂದು ಶಾಕ್ ನೀಡಲು ಮುಂದಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
2016ರಲ್ಲಿ ಭಾರತದಲ್ಲಿ ಟಿ20 ವಿಶ್ವಕಪ್ ನಡೆದಿತ್ತು. ಈ ವೇಳೆ ಪ್ರಸಾರದ ಹಕ್ಕು ಪಡೆದಿದ್ದ ಸ್ಟಾರ್ ನೆಟ್ವರ್ಕ್ ವಾಹಿನಿ, ಟಿಡಿಎಸ್ (ಟ್ಯಾಕ್ಸ್ ಡಿಡೆಕ್ಟೆಡ್ ಸೋರ್ಸ್) ಮೂಲಕ ಭಾರತ ಸರ್ಕಾರಕ್ಕೆ 125 ಕೋಟಿ ಪಾವತಿಸಿತ್ತು.
ಇದೀಗ ಈ ಮೊತ್ತವನ್ನು ಮರಳಿ ಪಾವತಿಸುವಂತೆ ಐಸಿಸಿ, ಬಿಸಿಸಿಐ ಅನ್ನು ಕೇಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಒಂದೊಮ್ಮೆ ಹೀಗಾದರೆ ಬಿಸಿಸಿಐಗೆ ಭಾರೀ ಹೊಡೆತ ಬೀಳಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.