
ದುಬೈ(ಡಿ.09): ಇತ್ತೀಚೆಗೆ ‘ಭಾರತ- ಶ್ರೀಲಂಕಾ ನಡುವೆ ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದ ವೇಳೆ ವಾಯುಮಾಲಿನ್ಯದ ಕಾರಣ ಉಂಟಾಗಿದ್ದ ವಿವಾದದ ಕುರಿತು ಫೆಬ್ರವರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚಿಸುವುದಾಗಿ ಐಸಿಸಿ ತಿಳಿಸಿದೆ. ಅಲ್ಲದೇ ‘ವಿಷಯದಲ್ಲಿ ಈ ರೀತಿಯ ಪರಿಸ್ಥಿತಿ ಉಂಟಾದಾಗ ಅನುಸರಿಸಬೇಕಾದ ನಿಯಮಗಳನ್ನು ರಚಿಸುವುದಾಗಿ ಹೇಳಿದೆ.
ವಾಯು ಮಾಲಿನ್ಯದ ಕಾರಣ ಲಂಕಾ ಆಟಗಾರರು ಮಾಸ್ಕ್ ಧರಿಸಿ ಕ್ಷೇತ್ರರಕ್ಷಣೆ ಮಾಡಿದ್ದರು. ಕೆಲಕಾಲ ಆಟವನ್ನು ಸ್ಥಗಿತಗೊಳಿಸಿದ್ದರು. ಲಂಕಾದ ಲಕ್ಮಲ್, ಭಾರತದ ಶಮಿ ಮೈದಾನ ದಲ್ಲೇ ವಾಂತಿ ಮಾಡಿಕೊಂಡಿದ್ದರು. ಐಸಿಸಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.
140 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ವಾಯು ಮಾಲಿನ್ಯದ ಕಾರಣದಿಂದ 26 ನಿಮಿಷಗಳ ಕಾಲ ಪಂದ್ಯವನ್ನು ರದ್ದು ಪಡಿಸಿದ್ದು ಮೊದಲ ಉದಾಹರಣೆ ಎನಿಸಿಕೊಂಡಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.