
ದುಬೈ(ಅ.17): ಐಸಿಸಿ ಭ್ರಷ್ಟಾಚಾರ ತನಿಖೆಗೆ ಸಹಕರಿಸದ ಶ್ರೀಲಂಕಾ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ವಿರುದ್ಧ ಐಸಿಸಿ ಹಿಡಿತ ಬಿಗಿಗೊಳಿಸಿದೆ. 14 ದಿನಗಳ ಒಳಗೆ ಉತ್ತರಿಸಲು ಸೂಚಿಸಿರುವ ಐಸಿಸಿ, ಜಯಸೂರ್ಯ ಭ್ರಷ್ಟಾಚಾರ ವಿರೋಧಿ ಕಾಯ್ದೆಯ ಆರ್ಟಿಕಲ್ 2.4.6 ಹಾಗೂ 2.4.7 ಉಲ್ಲಂಘಿಸಿದ್ದಾರೆ ಎಂದು ಹೇಳಿದೆ.
ಆರ್ಟಿಕಲ್ 2.4.6 ನಿಯಮ ಉಲ್ಲಂಘನೆಗೆ ಕನಿಷ್ಠ 6 ತಿಂಗಳ ಹಾಗೂ ಗರಿಷ್ಠ 5 ವರ್ಷದ ನಿಷೇಧದ ಶಿಕ್ಷೆ ವಿಧಿಸಲಾಗುತ್ತೆ. ಇದೀಗ ಜಯಸೂರ್ಯ ಈ ನಿಯಮ ಉಲ್ಲಂಘಿಸಿರೋದರಿಂದ ನಿಷೇಧದ ಭೀತಿ ಎದುರಿಸುತ್ತಿದ್ದಾರೆ.
ಐಸಿಸಿ ದೂರಿನ ಕುರಿತು ಕೊಲೊಂಬೋದಲ್ಲಿ ಪ್ರತಿಕ್ರಿಯಿಸಿದ ಶ್ರೀಲಂಕಾ ಬ್ಯಾಟಿಂಗ್ ದಿಗ್ಗಜ ಸನತ್ ಜಯಸೂರ್ಯ, ತಾವು ಸದಾ ಕ್ರಿಕೆಟ್ ಘನತೆ ಎತ್ತಿಹಿಡಿದಿರುವುದಾಗಿ ಹೇಳಿದ್ದಾರೆ. ‘ನಾನು 14 ದಿನಗಳೊಳಗೆ ವಿವರಣೆ ನೀಡಬೇಕಿದೆ. ಆರೋಪದ ಕುರಿತು ಯಾವುದೇ ಹೇಳಿಕೆಗಳನ್ನು ನೀಡದಂತೆ ನನಗೆ ಕಾನೂನು ಸಲಹೆ ನೀಡಲಾಗಿದೆ. ಆದರೆ ನಾನು ಎಂದಿಗೂ ಆಟಕ್ಕೆ ಧಕ್ಕೆ ಉಂಟು ಮಾಡಿಲ್ಲ. ಪ್ರತಿ ಬಾರಿಯೂ ಪಾರದರ್ಶಕವಾಗಿ ನಡೆದುಕೊಂಡಿದ್ದೇನೆ’ ಎಂದು ಜಯಸೂರ್ಯ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.