
ಕೋಲ್ಕತಾ(ಜು.01): ಆಟಗಾರರ ನಿರ್ವಹಣೆಯಲ್ಲಿ ಭಾರತ ತಂಡದ ಮಾಜಿ ಕೋಚ್ ಅನಿಲ್ ಕುಂಬ್ಳೆ ವಿಫಲಗೊಂಡಿದ್ದರು ಎಂದು ಕ್ರಿಕೆಟ್ ಸಲಹಾ ಸಮಿತಿ ಸದಸ್ಯರಲ್ಲಿ ಒಬ್ಬರಾದ ಸೌರವ್ ಗಂಗೂಲಿ ಸುಳಿವು ನೀಡಿದ್ದಾರೆ.
'ಸಾಕಷ್ಟು ಕ್ರಿಕೆಟ್ ಅನುಭವವಿರುವ ಅನಿಲ್ ಕುಂಬ್ಳೆ ಆಟಗಾರರನ್ನು ಸೂಕ್ತವಾಗಿ ನಿಭಾಯಿಸುತ್ತಾರೆ ಎನ್ನುವ ವಿಶ್ವಾಸದೊಂದಿಗೆ ಅವರನ್ನು ನೇಮಕ ಮಾಡಲಾಗಿತ್ತು' ಎಂದು ಹೇಳಿದ್ದಾರೆ. ಈ ಮೂಲಕ ತಮ್ಮ ನಿರೀಕ್ಷೆಯನ್ನು ಕುಂಬ್ಳೆ ಉಳಿಸಿಕೊಳ್ಳಲಿಲ್ಲ ಎಂಉ ಪರೋಕ್ಷವಾಗಿ ಹೇಳಿದ್ದಾರೆ.
ಉತ್ತಮ ಕೋಚ್ ಆಗಲು ಕೇವಲ ಆಕರ್ಷಕ ನಿರೂಪಣೆಯೊಂದಿದ್ದರಷ್ಟೇ ಸಾಲದು. ಕೋಚ್ ಆದವನಿಗೆ ತಂಡದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುವ ಕಲೆಯೂ ಗೊತ್ತಿರಬೇಕು ಎಂದು ದಾದಾ ಕಿವಿಮಾತು ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.