
ಕಾರ್ಡಿಪ್[ಮೇ.28]: ಭಾರತ-ಬಾಂಗ್ಲಾದೇಶ ನಡುವಿನ ಎರಡನೇ ಅಭ್ಯಾಸ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ದುಕೊಂಡಿದೆ. ಮೈದಾನ ಒದ್ದೆಯಾಗಿರುವುದರಿಂದ ಪಂದ್ಯ ತಡವಾಗಿ ಆರಂಭಗೊಳ್ಳಲಿದೆ.
ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಅಭ್ಯಾಸ ಪಂದ್ಯದಲ್ಲಿ ಮುಗ್ಗರಿಸಿದ್ದ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಇದೀಗ ಬಾಂಗ್ಲಾದೇಶ ಎದುರಿಸಲು ಸಜ್ಜಾಗಿದೆ. ಕೇದಾರ್ ಜಾಧವ್ ಸಂಪೂರ್ಣ ಫಿಟ್ ಆಗಿರದ ಹಿನ್ನಲೆಯಲ್ಲಿ ಈ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ವಿಜಯ್ ಶಂಕರ್ ಈಗ ತಂಡ ಕೂಡಿಕೊಂಡಿದ್ದಾರೆ.
ಇನ್ನು ಪಾಕಿಸ್ತಾನ ವಿರುದ್ಧ ಆಡಬೇಕಿದ್ದ ಮೊದಲ ಅಭ್ಯಾಸ ಪಂದ್ಯವು ರದ್ದಾಗಿದ್ದರಿಂದ ಬಾಂಗ್ಲಾದೇಶ ಇದೀಗ ಬಲಿಷ್ಠ ಟೀಂ ಇಂಡಿಯಾ ಸವಾಲು ಎದುರಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.