
ಲಾರ್ಡ್ಸ್(ಆ.10): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಟೆಸ್ಟ್ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿಯಾಗಿದೆ. ಮೊದಲ ದಿನ ಸಂಪೂರ್ಣವಾಗಿ ಮಳೆಯಿಂದಾಗಿ ರದ್ದಾಗಿತ್ತು. ಹೀಗಾಗಿ 2ನೇ ದಿನ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡು ಅತ್ಯುತ್ತಮ ದಾಳಿ ಸಂಘಟಿಸಿತ್ತು.
ರನ್ ಖಾತೆ ಆರಂಭಿಸೋ ಮೊದಲೇ ಭಾರತ ಮರುಳಿ ವಿಜಯ್ ವಿಕೆಟ್ ಪತನಗೊಂಡಿತ್ತು. ಇನ್ನು ಕೆಎಲ್ ರಾಹುಲ್ ಅಬ್ಬರ ಕೇವಲ 2 ಬೌಂಡರಿಗೆ ಸೀಮಿತವಾದರು. 6.3 ಓವರ್ಗಳಲ್ಲಿ ಭಾರತ 2 ವಿಕೆಟ್ ನಷ್ಟಕ್ಕೆ 11 ರನ್ ಸಿಡಿಸಿತ್ತು. ಅಷ್ಟರಲ್ಲೇ ಸುರಿದ ಮಳೆಯಿಂದಾಗಿ ಪಂದ್ಯವನ್ನ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.
5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ ಈಗಾಗಲೇ 1-0 ಮುನ್ನಡೆ ಸಾಧಿಸಿದೆ. ಹೀಗಾಗಿ 2ನೇ ಟೆಸ್ಟ್ ಪಂದ್ಯದಲ್ಲಿ ಕಮ್ಬ್ಯಾಕ್ ಮಾಡೋ ವಿಶ್ವಾಸದಲ್ಲಿದ್ದ ಟೀಂ ಇಂಡಿಯಾಗೆ ಇಂಗ್ಲೆಂಡ್ ಜೊತೆಗೆ ಮಳೆರಾಯ ಕೂಡ ಅಡ್ಡಿಯಾಗಿದ್ದಾನೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.