
ಲಾರ್ಡ್ಸ್(ಆ.10): ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಭಾರತ ಭಾರಿ ಹಿನ್ನಡೆ ಅನುಭವಿಸಿದೆ. ದ್ವಿತೀಯ ದಿನ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಇದೀಗ 7 ವಿಕೆಟ್ ಕಳೆದುಕೊಂಡಿದೆ ಸಂಕಷ್ಟದಲ್ಲಿದೆ.
ಲಾರ್ಡ್ಸ್ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮಳೆಯಿಂದಾಗಿ ರದ್ದಾಗಿತ್ತು. ಹೀಗಾಗಿ 2ನೇ ದಿನ ಟಾಸ್ ಸೋತು ಬ್ಯಾಟಿಂಗ್ ಇಳಿದ ಭಾರತಕ್ಕೆ ಮಳೆರಾಯನ ಜೊತೆ ಇಂಗ್ಲೆಂಡ್ ತಂಡ ಕೂಡ ಕಾಡಿತು. ರನ್ ಖಾತೆ ಆರಂಭಿಸೋ ಮೂದಲೇ ಮುರಳಿ ವಿಜಯ್ ಪೆವಿಲಿಯನ್ ಸೇರಿಕೊಂಡರು.
ಕೆಎಲ್ ರಾಹುಲ್ 2 ಬೌಂಡರಿ ಬಾರಿಸಿ ಔಟಾದರು. ಇನ್ನು 2ನೇ ಟೆಸ್ಟ್ ಪಂದ್ಯದಲ್ಲಿ ಅವಕಾಶ ಪಡೆದ ಚೇತೇಶ್ವರ್ ಪೂಜಾರ 1 ರನ್ ಸಿಡಿಸಿ ರನೌಟ್ಗೆ ಬಲಿಯಾದರು. ಅಷ್ಟರಲ್ಲೇ 2 ಬಾರಿ ಮಳೆಗೆ ಸ್ಥಗಿತಗೊಂಡಿದ್ದ ಪಂದ್ಯ ಮತ್ತೆ ಸುದೀರ್ಘ ಅವಧಿಗೆ ಸ್ಥಗಿತಗೊಂಡಿತು.
ಮಳೆ ಬಳಿಕ ಪಂದ್ಯ ಆರಂಭಗೊಂಡಾಗ ನಾಯಕ ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ತಂಡಕ್ಕೆ ಆಸರೆಯಾಗಿದ್ದರು. ಆದರೆ ಕೊಹ್ಲಿ 23 ರನ್ ಸಿಡಿಸಿ ಔಟಾದರು. ಹಾರ್ದಿಕ್ ಪಾಂಡ್ಯ 11 ಹಾಗೂ ದಿನೇಶ್ ಕಾರ್ತಿಕ್ 1 ರನ್ ಸಿಡಿಸಿ ಔಟಾದರು. ಅಲ್ಪ ಹೋರಾಟ ನೀಡಿದ ಅಜಿಂಕ್ಯ ರಹಾನೆ 18 ರನ್ ಸಿಡಿಸಿ ನಿರ್ಗಮಿಸಿದರು. 30 ಓವರ್ಗಳಲ್ಲಿ ಭಾರತ 84 ರನ್ಗೆ 7 ವಿಕೆಟ್ ಕಳೆದುಕೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.