
ಲಾರ್ಡ್ಸ್(ಆ.10): ಸತತ ಮಳೆಯಿಂದಾಗಿ ತಾತ್ಕಾಲಿಕ ಸ್ಧಗಿತಗೊಂಡಿದ್ದ ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯ ಮತ್ತೆ ಆರಂಭಗೊಂಡಿದೆ. ಆದರೆ ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಭಾರತ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದೆ. ಪಂದ್ಯ ಆರಂಭಗೊಂಡ ಕೆಲ ಕ್ಷಣಗಳಲ್ಲೇ ಟೀಂ ಇಂಡಿಯಾ 2 ವಿಕೆಟ್ ಕಳೆದುಕೊಂಡು ಹಿನ್ನಡೆ ಅನುಭವಿಸಿತ್ತು. 15 ರನ್ಗಳಿಸುವಷ್ಟರಲ್ಲೇ ಮತ್ತೊಂದು ವಿಕೆಟ್ ಪತನವಾಗೋ ಮೂಲಕ 3 ವಿಕೆಟ್ ಕಳೆದುಕೊಂಡಿತು.
ನಿರಂತರವಾಗಿ ಸುರಿದ ಮಳೆಯಿಂದಾಗಿ ಪಂದ್ಯವನ್ನ ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಪಂದ್ಯ ಆರಂಭಗೊಂಡಿದೆ. ಸದ್ಯ ಕ್ರೀಸ್ನಲ್ಲಿರೋ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ಅಜಿಂಕ್ಯ ರಹಾನೆ ಟೀಂ ಇಂಡಿಯಾವನ್ನ ಕಾಪಾಡಬೇಕಿದೆ.
ಟಾಸ್ ಸೋತು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ರನ್ ಖಾತೆ ಆರಂಭಿಸೋ ಮೊದಲೇ ಮುರಳಿ ವಿಜಯ್ ವಿಕೆಟ್ ಕಳೆದುಕೊಂಡಿತು. ಕೆಎಲ್ ರಾಹುಲ್ 8 ರನ್ ಸಿಡಿಸಿ ಔಟಾದರು. ಇದೀಗ ಪೂಜಾರ ಕೂಡ ಪೆವಿಲಿಯನ್ ಸೇರಿರೋದು ಭಾರತದ ತಲೆನೋವು ಹೆಚ್ಚಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.