
ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆಗಳಾಗಿದೆ. ಯುವ ಆಟಗಾರ ಸಾಯಿ ಸುದರ್ಶನ್ ಗಾಯದ ಕಾರಣದಿಂದ ಸರಣಿಯಿಂದ ಹೊರಬಿದ್ದಿದ್ದು, ಈ ಸ್ಥಾನಕ್ಕೆ ಮಿಡಲ್ ಅರ್ಡರ್ ಬ್ಯಾಟರ್ ಸರ್ಫರಾಜ್ ಖಾನ್ನನ್ನು ಆಯ್ಕೆ ಮಾಡಿದ್ದಾರೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಮಹತ್ವ ನಿರ್ಧಾರ ತೆಗೆದುಕೊಂಡಿದೆ. 2024ರಲ್ಲಿ ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ಸರ್ಫರಾಜ್ ಖಾನ್, ಸಮೀತ ಅವಕಾಶಗಳನ್ನು ಪಡೆದುಕೊಂಡು ಸಿಕ್ಕ ಅವಕಾಶಗಳಲ್ಲಿಯೇ ಮಿಂಚಿದ್ದರು. ಆದರೆ ಅವರ ಸ್ಥಾನ ಟೀಂ ಇಂಡಿಯಾದಲ್ಲಿ ಖಾಯಂ ಆಗಿರಲಿಲ್ಲ. ಆದರೆ ಈಗ ಮತ್ತೊಂದು ಅವಕಾಶ ಸರ್ಫರಾಜ್ ಖಾನ್ಗೆ ಲಭ್ಯವಾಗಿದೆ. ಆದರೆ ಸರ್ಫರಾಜ್ ಖಾನ್ ಆಯ್ಕೆ ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ಗೆ ಹೊಸ ತಲೆನೋವು ತಂದಿದೆ ಎಂದು ಕ್ರಿಕೆಟ್ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮುನ್ನ ಸುದರ್ಶನ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಆಡಿಸಲು ಗಂಭೀರ್ ಮುಂದಾಗಿದ್ದರು. ಆದರೆ ಈಗ ಆತನ ಸ್ಥಾನದಲ್ಲಿ ಬಂದಿರುವ ಸರ್ಫರಾಜ್ಗೆ ಈ ಸ್ಥಾನದಲ್ಲಿ ಆಡಿಸುವುದು ಅನುಮಾನ. ಏಕೆಂದರೆ ಸರ್ಫರಾಜ್ ಖಾನ್ ಹೆಚ್ಚು ಮಿಡಲ್ ಅರ್ಡರ್ ಅಂದರೆ ನಂ.05 ಅಥವಾ ನಂ.06ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಅನುಭವ ಹೊಂದಿದ್ದಾರೆ. ಈಗ ಖಾಲಿ ಆಗಿರುವ ಮೂರನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಅವರನ್ನು ಆಡಿಸುವುದು ಅಥವಾ ಯುವ ಆಟಗಾರ ದೇವದತ್ ಪಡಿಕ್ಕಲ್ ಅವರಿಗೆ ಅವಕಾಶ ನೀಡುವ ಬಗ್ಗೆ ಗಂಭೀರ್ ಚಿಂತನೆ ಮಾಡಬಹುದು. ಏಕೆಂದರೆ ಅಭ್ಯಾಸ ಪಂದ್ಯದಲ್ಲಿ ಪಡಿಕ್ಕಲ್ ಶತಕ ಸಿಡಿಸಿ ಗಮನಸೆಳೆದಿದ್ದು, ಆತನ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ.
Mohammed Siraj with the winning runs 🔥🔥
A successful chase in Colombo for #TeamIndia against SLC XI 👏👏
Scorecard ▶️ https://t.co/g7rdlUUjY2 pic.twitter.com/4rAFzHXWXN— BCCI (@BCCI) August 9, 2026
ಶ್ರೀಲಂಕಾ ಇಲೆವೆನ್ ತಂಡದ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ಪಡಿಕ್ಕಲ್ 3ನೇ ಕ್ರಮಾಂಕದಲ್ಲಿ ಆಡಿದ್ದು, ಎರಡನೇ ಇನ್ನಿಂಗ್ಸ್ ನಲ್ಲಿ ರಿಷಭ್ ಪಂತ್ ಅವರನ್ನು ಕಣಕ್ಕೆ ಇಳಿಸಿದ್ದರು. ಮತ್ತೊಂದು ಕಡೆ ಸರ್ಫರಾಜ್ ಖಾನ್ ತನ್ನ ವೃತ್ತಿಜೀವನದಲ್ಲಿ 6 ಅಂತರಾಷ್ಟ್ರೀಯ ಇನ್ನಿಂಗ್ಸ್ ಗಳನ್ನು ಆಡಿದ್ದು, ಇದರಲ್ಲಿ 5-6ನೇ ಕ್ರಮಾಂಕದಲ್ಲಿಯೇ ಆಡಿದ್ದರು. ಕೆಲವೊಮ್ಮೆ ಮಾತ್ರ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಿದ್ದರು. ನ್ಯೂಜಿಲೆಂಡ್ ವಿರುದ್ಧ ತಮ್ಮ ಏಕೈಕ ಟೆಸ್ಟ್ ಶತಕ ಸಿಡಿಸಿದ್ದ ವೇಳೆಯೂ ನಾಲ್ಕನೇ ಕ್ರಮಾಂಕದಲ್ಲಿ ಆಡಿದ್ದರು. ಈ ಹಿನ್ನೆಲೆಯಿಂದಲೇ ಅವರನ್ನು ಮತ್ತೆ ಮಿಡಲ್ ಅರ್ಡರ್ನಲ್ಲಿಯೇ ಆಡಿಸುವ ಅವಕಾಶ ಹೆಚ್ಚಿರುತ್ತದೆ.
ಮೊದಲ ಟೆಸ್ಟ್ ಪಂದ್ಯವೂ ಗಾಲೆ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾರತ ಅಂತಿಮ ಪ್ಲೇಯಿಂಗ್ ಇಲೆವೆನ್ ಹೇಗಿರುತ್ತದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಆರಂಭಿಕರಾಗಿ ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸಿದರೆ, ಪಡಿಕ್ಕಲ್ ಒನ್ ಡೌನ್, ನಾಯಕ ಗಿಲ್ ನಾಲ್ಕನೇ ಕ್ರಮಾಂಕದಲ್ಲಿ ಆಡುವ ಅವಕಾಶವಿದೆ. ವಿಕೆಟ್ ಕೀಪರ್ ಜೊತೆಗೆ ಐದನೇ ಕ್ರಮಾಂಕದಲ್ಲಿ ಪಂತ್ ಅಥವಾ ಜುರೇಲ್, 6ನೇ ಕ್ರಮಾಂಕದಲ್ಲಿ ಜಡೇಜಾ, 7ನೇ ಸ್ಥಾನದಲ್ಲಿ ಆಲ್ರೌಂಡರ್ ಕೋಟಾದಲ್ಲಿ ಸರಾಂಶ್ ಜೈನ್ಗೆ ಅವಕಾಶ ಸಿಗುವ ನಿರೀಕ್ಷೆ ಇದೆ. ಈಗಾಗಲೇ ಜಡೇಜಾ, ಕುಲ್ಡೀಪ್ ಯಾದವ್ ಅವರು ಲೆಫ್ಟ್ ಆರ್ಮ್ ಸ್ಪಿನ್ನರ್ ಗಳು ಇರುವುದರಿಂದ ಆಫ್ ಸ್ಪಿನ್ನರ್ ಆಗಿರುವ ಜೈನ್ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನು, ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್, ವೇಗದ ಬೌಲಿಂಗ್ನಲ್ಲಿ ಸಿರಾಜ್, ಪ್ರಸಿದ್ಧ್ ಕೃಷ್ಣ, ಬ್ರಾರ್ ಆಡೋದು ಖಚಿತವಾಗಿದೆ. ಇದರೊಂದಿಗೆ ನಬೀ ಪಾದಾರ್ಪಣೆಗೆ ಇನ್ನು ಕಾಯಬೇಕಾಗುತ್ತದೆ. ಸಿರಾಜ್ ತಂಡಕ್ಕೆ ವಾಪಸ್ ಆದರೂ ಪ್ಲೇಯಿಂಗ್ ಇಲೆವೆನ್ನಲ್ಲಿ ಆಡಲು ತೀವ್ರಪೈಪೋಟಿ ಎದುರಿಸಿದ್ದಾರೆ.
🚨 NEWS 🚨
Sai Sudharsan ruled out of the #SLvIND Test series; Sarfaraz Khan named replacement.
Details 🔽 #TeamIndia https://t.co/lF6h8jabZd pic.twitter.com/Dk0C4HI37p— BCCI (@BCCI) August 9, 2026
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.