
ರಾಜ್’ಕೋಟ್[ಅ.06]: ಮಣಿಕಟ್ಟಿನ ಸ್ಪಿನ್ನರ್ ಕುಲ್ದೀಪ್ ಯಾದವ್ ಮಾರಕ ದಾಳಿಗೆ ವೆಸ್ಟ್ ಇಂಡೀಸ್ ಇನ್ನಿಂಗ್ಸ್ ಸೋಲಿನತ್ತ ಮುಖ ಮಾಡಿದ್ದು ಚಹಾ ವಿರಾಮದ ವೇಳೆಗೆ 2ನೇ ಇನ್ನಿಂಗ್ಸ್’ನಲ್ಲಿ 8 ವಿಕೆಟ್ ಕಳೆದುಕೊಂಡು 185 ರನ್ ಬಾರಿಸಿದೆ. ಈ ಮೂಲಕ ಇನ್ನೂ 283 ರನ್’ಗಳ ಹಿನ್ನಡೆ ಅನುಭವಿಸಿದೆ.
ಮೊದಲ ಇನ್ನಿಂಗ್ಸ್’ನಲ್ಲಿ ಕೇವಲ 181 ರನ್’ಗಳಿಗೆ ಆಲೌಟ್ ಆಗಿ ಫಾಲೋ ಆನ್’ಗೆ ಒಳಗಾಗಿದ್ದ ಕೆರಿಬಿಯನ್ ಪಡೆ ಎರಡನೇ ಇನ್ನಿಂಗ್ಸ್’ನಲ್ಲೂ ಹೀನಾಯ ಬ್ಯಾಟಿಂಗ್ ಪ್ರದರ್ಶನ ಮುಂದುವರೆಸಿದೆ. ಆರಂಭಿಕ ಕಿರಾನ್ ಪೋವೆಲ್ ಹೊರತು ಪಡಿಸಿ ಉಳಿದ್ಯಾವ ಬ್ಯಾಟ್ಸ್’ಮನ್ ಕೂಡಾ ನೆಲಕಚ್ಚಿ ಆಡುವ ಪ್ರಯತ್ನ ಮಾಡಲಿಲ್ಲ.
ಕುಲ್ದೀಪ್ 57 ರನ್ ನೀಡಿ 5 ವಿಕೆಟ್ ಕಬಳಿಸಿದರೆ, ರವಿಚಂದ್ರನ್ ಅಶ್ವಿನ್ 2 ವಿಕೆಟ್ ಕಬಳಿಸಿದ್ದಾರೆ. ಇನ್ನು ರವೀಂದ್ರ ಜಡೇಜಾ ಒಂದು ವಿಕೆಟ್ ಕಬಳಿಸಿದ್ದಾರೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.