ಏಷ್ಯಾ ಕಪ್ ಹಾಕಿ: ಮನ್'ಪ್ರೀತ್ ಕ್ಯಾಪ್ಟನ್; ಕಮ್'ಬ್ಯಾಕ್ ಮಾಡಿದ ಸರ್ದಾರ್ ಸಿಂಗ್

Published : Sep 17, 2017, 11:39 AM ISTUpdated : Apr 11, 2018, 12:46 PM IST
ಏಷ್ಯಾ ಕಪ್ ಹಾಕಿ: ಮನ್'ಪ್ರೀತ್ ಕ್ಯಾಪ್ಟನ್; ಕಮ್'ಬ್ಯಾಕ್ ಮಾಡಿದ ಸರ್ದಾರ್ ಸಿಂಗ್

ಸಾರಾಂಶ

ಕಳೆದ ತಿಂಗಳ ಯೂರೋಪ್ ಪ್ರವಾಸದಲ್ಲಿ ಅನುಭವ ಹಾಕಿ ಪಟು ಸರ್ದಾರ್ ಸಿಂಗ್ ಅವರನ್ನು ಕೈಬಿಡಲಾಗಿತ್ತು. ಇತ್ತೀಚೆಗಷ್ಟೇ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಸರ್ದಾರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ನವದೆಹಲಿ(ಸೆ.17): ಇದೇ ಅಕ್ಟೋಬರ್ 11 ರಿಂದ 22 ರವರೆಗೆ ಬಾಂಗ್ಲಾದೇಶದ ಢಾಕಾದಲ್ಲಿ ನಡೆಯಲಿರುವ ಏಷ್ಯಾ ಕಪ್ ಹಾಕಿ ಪಂದ್ಯಾವಳಿಗೆ 18 ಸದಸ್ಯರ ಭಾರತ ತಂಡ ಪ್ರಕಟಗೊಂಡಿದ್ದು, ಅನುಭವಿ ಆಟಗಾರ ಸರ್ದಾರ್ ಸಿಂಗ್ ತಂಡಕ್ಕೆ ಕಮ್'ಬ್ಯಾಕ್ ಮಾಡಿದ್ದಾರೆ.

ಮನ್'ಪ್ರೀತ್ ಸಿಂಗ್ ತಂಡವನ್ನು ಮುನ್ನಡೆಸಲಿದ್ದು, ಕರ್ನಾಟಕದ ಎಸ್.ವಿ.ಸುನಿಲ್ ಉಪನಾಯಕರಾಗಿದ್ದಾರೆ. ಕಳೆದ ತಿಂಗಳ ಯೂರೋಪ್ ಪ್ರವಾಸದಲ್ಲಿ ಅನುಭವ ಹಾಕಿ ಪಟು ಸರ್ದಾರ್ ಸಿಂಗ್ ಅವರನ್ನು ಕೈಬಿಡಲಾಗಿತ್ತು. ಇತ್ತೀಚೆಗಷ್ಟೇ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಸರ್ದಾರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದೇವೇಳೆ ಯೂರೋಪ್ ಪ್ರವಾಸದಲ್ಲಿ ಮತ್ತಿಬ್ಬರು ಪ್ರಮುಖ ಆಟಗಾರರಾದ ಎಸ್.ವಿ. ಸುನಿಲ್ ಮತ್ತು ಆಕಾಶ್ ದೀಪ್ ಸಿಂಗ್ ಅವರನ್ನು ಕೈಬಿಡಲಾಗಿತ್ತು. ಈ ಇಬ್ಬರು ಆಟಗಾರರು ಈಗ ತಂಡ ಕೂಡಿಕೊಂಡಿದ್ದಾರೆ.

ಭಾರತ ‘ಎ’ ಗುಂಪಿನಲ್ಲಿದ್ದು ಜಪಾನ್, ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಗುಂಪಿನಲ್ಲಿರುವ ಇತರೆ ತಂಡಗಳು. ಭಾರತ ಅ.11ರಂದು ಜಪಾನ್, ಅ.13ರಂದು ಬಾಂಗ್ಲಾ ಮತ್ತು ಅ.15ರಂದು ಪಾಕಿಸ್ತಾನವನ್ನು ಎದುರಿಸಲಿದೆ.

ತಂಡದ ವಿವರ

ಗೋಲ್‌'ಕೀಪರ್ಸ್‌: ಆಕಾಶ್ ಚಿಕ್ಟೆ, ಸೂರಜ್.

ಡಿಫೆಂಡರ್ಸ್‌: ದೀಪನ್ಸ್ ಟಿರ್ಕೆ, ಕೊತಾಜಿತ್, ಸುರೇಂದರ್, ಹರ್ಮನ್‌ಪ್ರೀತ್, ವರುಣ್.

ಮಿಡ್ ಫೀಲ್ಡರ್ಸ್‌: ಎಸ್.ಕೆ. ಉತ್ತಪ್ಪ, ಸರ್ದಾರ್, ಮನ್‌ಪ್ರೀತ್(ನಾಯಕ), ಚಿಂಗ್ಲೆನ್‌'ಸಾನ, ಸುಮಿತ್. ಫಾರ್ವರ್ಡ್ಸ್: ಎಸ್.ವಿ.ಸುನಿಲ್, ಆಕಾಶ್‌'ದೀಪ್, ರಮಣ್‌'ದೀಪ್, ಲಲಿತ್, ಗುರ್ಜಂತ್, ಸತ್ಬೀರ್.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಡರ್ 19 ಏಷ್ಯಾಕಪ್ ಫೈನಲ್: ಪಾಕ್ ಎದುರು ಮುಗ್ಗರಿಸಿದ ಭಾರತ; ವೈಭವ್ ಸೂರ್ಯವಂಶಿ ಕನಸು ನುಚ್ಚುನೂರು!
2026ರ ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 7 ಬದಲಾವಣೆ!