ಕಬಡ್ಡಿ: ಬಾಂಗ್ಲಾದೇಶಕ್ಕೆ ಸೋಲುಣಿಸಿದ ಭಾರತದ ಸೆಮಿಫೈನಲ್ ಆಸೆ ಜೀವಂತ

Published : Oct 12, 2016, 11:10 AM ISTUpdated : Apr 11, 2018, 12:46 PM IST
ಕಬಡ್ಡಿ: ಬಾಂಗ್ಲಾದೇಶಕ್ಕೆ ಸೋಲುಣಿಸಿದ ಭಾರತದ ಸೆಮಿಫೈನಲ್ ಆಸೆ ಜೀವಂತ

ಸಾರಾಂಶ

ಶನಿವಾರ ನಡೆಯಲಿರುವ ತನ್ನ ನಾಲ್ಕನೇ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ ಭಾರತ ಸೆಣಸಲಿದೆ. ಈ ಪಂದ್ಯವನ್ನು ಗೆದ್ದರೆ ಭಾರತ ಸೆಮಿಫೈನಲ್ ಪ್ರವೇಶಿಸಬಹುದು.

ಅಹ್ಮದಾಬಾದ್(ಅ. 12): ಪ್ರಸಕ್ತ ವಿಶ್ವಕಪ್'ನಲ್ಲಿ ಭಾರತದ ಸೆಮಿಫೈನಲ್ ಆಸೆ ಜೀವಂತವಾಗಿದೆ. ನಿನ್ನೆ ರಾತ್ರಿ ನಡೆದ ಗ್ರೂಪ್ ಎ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ 57-20ರಿಂದ ಸುಲಭ ಗೆಲುವು ಸಾಧಿಸಿತು. ಅಜಯ್ ಠಾಕೂರ್ 10 ಪಾಯಿಂಟ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಪ್ರದೀಪ್ ನರ್ವಾಲ್ 8 ಪಾಯಿಂಟ್ ಗಳಿಸಿದರು.

ಈ ವಿಶ್ವಕಪ್'ನಲ್ಲಿ ಭಾರತಕ್ಕಿದು ಎರಡನೇ ಗೆಲುವಾಗಿದೆ. ಮೊದಲ ಪಂದ್ಯದಲ್ಲಿ ದಕ್ಷಿಣ ಕೊರಿಯಾ ವಿರುದ್ಧ ಸೋಲಿನ ಶಾಕ್ ಅನುಭವಿಸಿದ್ದ ಭಾರತ ತನ್ನ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿತ್ತು. ಶನಿವಾರ ನಡೆಯಲಿರುವ ತನ್ನ ನಾಲ್ಕನೇ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ ಭಾರತ ಸೆಣಸಲಿದೆ. ಈ ಪಂದ್ಯವನ್ನು ಗೆದ್ದರೆ ಭಾರತ ಸೆಮಿಫೈನಲ್ ಪ್ರವೇಶಿಸುತ್ತದೆ. ಇನ್ನೊಂದೆಡೆ, ನಾಳೆ ಗುರುವಾರ ಎ ಗುಂಪಿನಲ್ಲಿ ಮಹತ್ವದ ಪಂದ್ಯದ ನಡೆಯಲಿದೆ. ಅಂದು ಬಾಂಗ್ಲಾದೇಶ ಹಾಗೂ ದಕ್ಷಿಣ ಕೊರಿಯಾ ತಂಡಗಳು ಮುಖಾಮುಖಿಯಾಗಲಿವೆ. ಆ ಪಂದ್ಯದಲ್ಲಿ ಬಾಂಗ್ಲಾದೇಶ ಗೆದ್ದದ್ದೇ ಅದಲ್ಲಿ ಗುಂಪಿನಲ್ಲಿ ಸೆಮಿಫೈನಲ್ ಸ್ಥಾನಕ್ಕೆ ರೋಚಕ ಪೈಪೋಟಿ ನಡೆಯಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?