ಭಾರತಕ್ಕೆ ಏಷ್ಯಾ ಕಪ್ ಕ್ರಿಕೆಟ್ ಆತಿಥ್ಯ ಕೈತಪ್ಪುವ ಆತಂಕ..?

Published : Dec 09, 2017, 02:39 PM ISTUpdated : Apr 11, 2018, 01:01 PM IST
ಭಾರತಕ್ಕೆ ಏಷ್ಯಾ ಕಪ್ ಕ್ರಿಕೆಟ್ ಆತಿಥ್ಯ ಕೈತಪ್ಪುವ ಆತಂಕ..?

ಸಾರಾಂಶ

ಕಳೆದ ವರ್ಷ ನಡೆದಿದ್ದ ಅಂಡರ್ 19 ಏಷ್ಯಾಕಪ್‌'ಗೂ ಭಾರತ ಸರ್ಕಾರ ಅನುಮತಿ ನೀಡಿರಲಿಲ್ಲ. ಆಗ ಆತಿಥ್ಯ ಶ್ರೀಲಂಕಾ ಪಾಲಾಗಿತ್ತು. ನ.21ರಂದು ನಡೆದ ಸುಪ್ರೀಂಕೋರ್ಟ್ ನೇಮಿತ ಬಿಸಿಸಿಐನ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿತ್ತಾದರೂ, ಈ ಬಗ್ಗೆ ಯಾವುದೇ ನಿರ್ಧಾರ ಹೊರಬಂದಿಲ್ಲ.

ಮುಂಬೈ(ಡಿ.09): ಮುಂದಿನ ವರ್ಷ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯ ಆತಿಥ್ಯ ಭಾರತದ ಕೈತಪ್ಪುವ ಸಾಧ್ಯತೆ ದಿನ ಕಳೆದಂತೆ ದಟ್ಟವಾಗುತ್ತಿದೆ. ಪಾಕಿಸ್ತಾನದ ಆಟಗಾರರಿಗೆ ಭಾರತ ಸರ್ಕಾರ ವೀಸಾ ನೀಡುವುದು ಅನುಮಾನ ಇರುವ ಕಾರಣ, ಈ ಸುದ್ದಿಗೆ ಮತ್ತಷ್ಟು ಪುಷ್ಟಿ ನೀಡಿದೆ.

ಕಳೆದ ವರ್ಷ ನಡೆದಿದ್ದ ಅಂಡರ್ 19 ಏಷ್ಯಾಕಪ್‌'ಗೂ ಭಾರತ ಸರ್ಕಾರ ಅನುಮತಿ ನೀಡಿರಲಿಲ್ಲ. ಆಗ ಆತಿಥ್ಯ ಶ್ರೀಲಂಕಾ ಪಾಲಾಗಿತ್ತು. ನ.21ರಂದು ನಡೆದ ಸುಪ್ರೀಂಕೋರ್ಟ್ ನೇಮಿತ ಬಿಸಿಸಿಐನ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿತ್ತಾದರೂ, ಈ ಬಗ್ಗೆ ಯಾವುದೇ ನಿರ್ಧಾರ ಹೊರಬಂದಿಲ್ಲ.

ಪಂದ್ಯಾವಳಿ ನಡೆಸಲು ಸರ್ಕಾರ ಅನುಮತಿ ನೀಡುವುದು ಕಷ್ಟ ಸಾಧ್ಯವಾಗಿದೆ. ಇತ್ತೀಚೆಗೆ ನಡೆದ ಏಷ್ಯಾ ಅಥ್ಲೆಟಿಕ್ಸ್ ಚಾಂಪಿಯನ್‌'ಶಿಪ್ ವೇಳೆ ಪಾಕಿಸ್ತಾನದ ಕ್ರೀಡಾಪಟುಗಳಿಗೆ ಭಾರತ ಸರ್ಕಾರ ವೀಸಾ ನೀಡಿತ್ತು. ಆದರೆ, ಕ್ರಿಕೆಟ್ ವಿಷಯದಲ್ಲಿ ಮಾತ್ರ ಭಾರತ ಸರ್ಕಾರದ ನಡೆ ಬಹಳ ಖಡಕ್ ಆಗಿದೆ. ಕ್ರಿಕೆಟ್ ಭಾವನಾತ್ಮಕ ವಿಷಯವಾಗಿರುವ ಕಾರಣ ಭಾರತ ಸರ್ಕಾರ, ಪಾಕ್ ಆಟಗಾರಿಗೆ ವೀಸಾ ನೀಡುವುದು ಅನುಮಾನವಾಗಿದ್ದು, ಏಷ್ಯಾಕಪ್ ಆತಿಥ್ಯ ಭಾರತದ ಕೈತಪ್ಪುವ ಸಾಧ್ಯತೆದಟ್ಟವಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಏನಿದು ಬಜಾಜ್ ಚೇತಕ್ C25 ವಿಶೇಷತೆ? WPL ಗೆದ್ದ ಆರ್‌ಸಿಬಿ ಗರ್ಲ್ಸ್‌ಗೆ ಸೇರಿದ ಲೇಟೆಸ್ಟ್ ಎಲೆಕ್ಟ್ರಿಕ್ ರೈಡ್ ಸೆನ್ಸೇಷನ್‌!
ರಣಜಿ ಟ್ರೋಫಿ: ಮುಂಬೈ ತಂಡವನ್ನು ಅವರದ್ದೇ ನೆಲದಲ್ಲಿ ಬಗ್ಗುಬಡಿದು ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಕರ್ನಾಟಕ! ಕೆ.ಎಲ್ ಭರ್ಜರಿ ಶತಕ