
ನಾಗಪುರ್(ಜ. 29): ಇಂಗ್ಲೆಂಡ್ ವಿರುದ್ಧದ ಟಿ20 ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಸೋಲಿನ ಶಾಕ್ ಅನುಭವಿಸಿದ ಟೀಮ್ ಇಂಡಿಯಾ ಎರಡನೇ ಪಂದ್ಯಕ್ಕೆ ಒಂದಷ್ಟು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಇಂದು ನಡೆಯಲಿರುವ ಎರಡನೇ ಟಿ20 ಪಂದ್ಯದಲ್ಲಿ ಕೆಎಲ್ ರಾಹುಲ್ ಮತ್ತು ಪರ್ವೇಜ್ ರಸೂಲ್ ಅವರನ್ನು ಕೈಬಿಡುವ ಸಾಧ್ಯತೆ ಇದೆ. ಆಶೀಶ್ ನೆಹ್ರಾ ಅಥವಾ ಜಸ್'ಪ್ರೀತ್ ಬುಮ್ರಾ ಅವರಿಬ್ಬರಲ್ಲೊಬರಿಗೆ ಕೊಕ್ ಕೊಡಬಹುದು. ರಾಹುಲ್ ಸ್ಥಾನಕ್ಕೆ ರಿಶಬ್ ಪಂತ್ ಅಥವಾ ಅಜಿಂಕ್ಯ ರಹಾನೆಗೆ ಚಾನ್ಸ್ ಕೊಡಬಹುದು. ಪರ್ವೆಜ್ ರಸೂಲ್ ಜಾಗಕ್ಕೆ ಅಮಿತ್ ಮಿಶ್ರಾ ಅವರನ್ನು ಆಡಿಸಬಹುದು. ಜೊತೆಗೆ ಸ್ವಿಂಗ್ ಸ್ಪೆಷಲಿಸ್ಟ್ ಭುವನೇಶ್ವರ್ ಕುಮಾರ್ ಅವರಿಗೆ ಅವಕಾಶ ನೀಡಬಹುದೆನ್ನಲಾಗಿದೆ. ಮನೀಶ್ ಪಾಂಡೆಗೆ ಮತ್ತೊಂದು ಅವಕಾಶ ಸಿಗಬಹುದು.
ಇಂದು ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.