
ಕಲ್ಗಾರಿ(ಜು.15): ಹಾಲಿ ಚಾಂಪಿಯನ್ ಭಾರತದ ಪುರುಷರ ಡಬಲ್ಸ್ ಆಟಗಾರರಾದ ಮನು ಅತ್ರಿ ಮತ್ತು ಬಿ ಸುಮಿತ್ ರೆಡ್ಡಿ ಜೋಡಿ, ಕೆನಡಾ ಓಪನ್ ಗ್ರ್ಯಾನ್ ಪ್ರೀ ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್'ಫೈನಲ್'ನಲ್ಲಿ ಸೋಲು ಕಾಣುವ ಮೂಲಕ ಭಾರತದ ಸವಾಲು ಅಂತ್ಯವಾಗಿದೆ.
ಇಂದು ನಡೆದ ಎಂಟರಘಟ್ಟದ ಪಂದ್ಯದಲ್ಲಿ 3ನೇ ಶ್ರೇಯಾಂಕಿತ ಭಾರತದ ಮನು ಮತ್ತು ಸುಮಿತ್ ಜೋಡಿ 12-21, 15-21 ಗೇಮ್'ಗಳಿಂದ ಕೊರಿಯಾದ ಕಿಮ್ ವಾನ್ ಹೊ ಹಾಗೂ ಸೆಂಗ್ ಜೇ ಸಿಯೊ ಜೋಡಿ ವಿರುದ್ಧ ಸೋಲು ಕಂಡಿತು.
ಇನ್ನು ಮಿಶ್ರ ಡಬಲ್ಸ್ ವಿಭಾಗದ ಎಂಟರಘಟ್ಟದ ಪಂದ್ಯದಲ್ಲಿ ಪ್ರಣವ್ ಜೆರ್ರಿ ಚೋಪ್ರಾ ಮತ್ತು ಎನ್. ಸಿಕ್ಕಿ ರೆಡ್ಡಿ ಜೋಡಿ 17-21, 22-20, 18-21 ಗೇಮ್ಗಳಿಂದ ಕೊರಿಯಾದ ಕಿಮ್ ವಾನ್ ಹೊ ಮತ್ತು ಶಿನ್ ಸೆಂಗ್ ಜೋಡಿ ಎದುರು ಸೋಲುಂಡಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.