
ಮುಂಬೈ(ಡಿ.24): ಲಂಕಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ದುಕೊಂಡಿದೆ. ಭಾರತ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದ್ದು ಚಾಹಲ್ ಹಾಗೂ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು ಮೊಹಮ್ಮದ್ ಸಿರಾಜ್ ತಂಡ ಕೂಡಿಕೊಂಡರೆ, ಯುವ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಟಿ20 ಕ್ರಿಕೆಟ್'ಗೆ ಪದಾರ್ಪಣೆ ಮಾಡಿದ್ದಾರೆ.
ಭಾರತ-ಶ್ರೀಲಂಕಾ ನಡುವಿನ ಕೊನೆಯ ಪಂದ್ಯಕ್ಕೆ ಆತಿಥ್ಯ ವಹಿಸಲು ಮುಂಬೈನ ವಾಂಖೆಡೆ ಮೈದಾನ ಸಜ್ಜಾಗಿದ್ದು, ಭಾರತ ಪರ ಎರಡು ಬದಲಾವಣೆ ಮಾಡಲಾಗಿದ್ದರೆ, ಲಂಕಾ ತಂಡದಲ್ಲೂ 2 ಬದಲಾವಣೆ ಮಾಡಲಾಗಿದ್ದು ಮ್ಯಾಥ್ಯೂಸ್ ಹಾಗೂ ಸಿಲ್ವಾ ಬದಲಿಗೆ ಗುಣತಿಲಕಾ ಹಾಗೂ ಸನಕ ತಂಡ ಕೂಡಿಕೊಂಡಿದ್ದಾರೆ
ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಈಗಾಗಲೇ 2-0 ಅಂತರದಲ್ಲಿ ಟೀಂ ಇಂಡಿಯಾ ಸರಣಿ ಗೆದ್ದುಕೊಂಡಿದೆ. ಇದೀಗ ಕೊನೆಯ ಔಪಚಾರಿಕ ಪಂದ್ಯದಲ್ಲೂ ಜಯಭೇರಿ ಬಾರಿಸುವ ವಿಶ್ವಾಸದಲ್ಲಿ ಟೀಂ ಇಂಡಿಯಾ ಕಣಕ್ಕಿಳಿಯಲಿದೆ. ಇನ್ನು ಕೊನೆಯ ಪಂದ್ಯವನ್ನಾದರೂ ಗೆದ್ದು 2017ಕ್ಕೆ ಗುಡ್ ಬೈ ಹೇಳುವ ನಿರೀಕ್ಷೆಯಲ್ಲಿದೆ ಲಂಕಾ ಪಡೆ.
ತಂಡಗಳು ಹೀಗಿವೆ:
ಭಾರತ:
ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ಎಂ.ಎಸ್. ಧೋನಿ, ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, , ಜಯದೇವ್ ಉನಾದ್ಕಟ್, ಮೊಹಮ್ಮದ್ ಸಿರಾಜ್
ಶ್ರೀಲಂಕಾ: ನಿರ್ಶೋನ್ ಡಿಕ್'ವೆಲ್ಲಾ, ಉಫುಲ್ ತರಂಗಾ, ಕುಸಾಲ್ ಪೆರೇರಾ, ಧನುಷ್ಕಾ ಗುಣತಿಲಕ, ಸದೀರಾ ಸಮರವಿಕ್ರಮ, ಅಸೀಲಾ ಗುಣರತ್ನೆ, ತಿಸಾರ ಪೆರೇರಾ, ಅಕಿಲಾ ಧನಂಜಯ, ದುಸ್ಮಂತ ಚಮೀರಾ, ನುವಾನ್ ಪ್ರದೀಪ್, ದಶುನ್ ಸನಕಾ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.