
ನವದೆಹಲಿ: 2036ರ ಒಲಿಂಪಿಕ್ಸ್ ಆತಿಥ್ಯ ವಹಿಸಲು ಬಿಡ್ ಸಲ್ಲಿಸಿರುವ ಭಾರತ, 2030ರ ಕಾಮನ್ವೆಲ್ತ್ ಗೇಮ್ಸ್ಗೂ ಆತಿಥ್ಯ ವಹಿಸಲು ಆಸಕ್ತಿ ತೋರಿದೆ. ಭಾರತ ಪ್ರವಾಸದಲ್ಲಿರುವ ಕಾಮನ್ವೆಲ್ತ್ ಗೇಮ್ಸ್ ಫೆಡರೇಶನ್(ಸಿಜೆಎಫ್) ಅಧಿಕಾರಿಗಳ ಜೊತೆ ಕೇಂದ್ರ ಸರ್ಕಾರದ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ. ಕ್ರೀಡಾಕೂಟವನ್ನು ಅಹಮದಾಬಾದ್ ಅಥವಾ ಭುವನೇಶ್ವರದಲ್ಲಿ ಆಯೋಜಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಅಲ್ಲದೆ ಸಿಜೆಎಫ್ ಅಧಿಕಾರಿಗಳು ಈ ಎರಡೂ ನಗರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ಭಾರತ ಕ್ರೀಡಾಕೂಟದ ಆತಿಥ್ಯಕ್ಕೆ ಬಿಡ್ ಸಲ್ಲಿಸಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಬಿಡ್ ಸಲ್ಲಿಕೆಗೆ ಮಾ.31 ಕೊನೆ ದಿನಾಂಕ.
ಈ ಹಿಂದೆ 2010ರಲ್ಲಿ ಭಾರತದಲ್ಲಿ ಕೊನೆ ಬಾರಿ ಕಾಮನ್ವೆಲ್ತ್ ಗೇಮ್ಸ್ ಆಯೋಜಿಸಲಾಗಿತ್ತು. ಆದರೆ ಕ್ರೀಡಾಕೂಟ ಆಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿತ್ತು.
ಯೋಗಾಸನದಲ್ಲಿ ಕಂಚು ಗೆದ್ದ ಕರ್ನಾಟಕದ ಅನನ್ಯ
ಡೆಹ್ರಾಡೂನ್/ಹಲ್ದ್ವಾನಿ: 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದ ಪದಕ ಬೇಟೆ ಮುಂದುವರಿದಿದೆ. ಬುಧವಾರ ರಾಜ್ಯದ ಕ್ರೀಡಾಪಟುಗಳು 2 ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದರೊಂದಿಗೆ ರಾಜ್ಯದ ಪದಕ ಗಳಿಕೆ 54ಕ್ಕೆ ಏರಿಕೆಯಾಗಿದೆ. ಕರ್ನಾಟಕ 28 ಚಿನ್ನ, 11 ಬೆಳ್ಳಿ ಹಾಗೂ 15 ಕಂಚಿನ ಪದಕಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.
ಮಹಿಳೆಯರ ಸಾಂಪ್ರದಾಯಿಕ ಯೋಗಾಸನದಲ್ಲಿ ಅನನ್ಯ ಸಂಬಯ್ಯ ಹಿರೇಮಠ ಕಂಚಿನ ಪದಕ ಜಯಿಸಿದರು. ಪುರುಷರ ಕೆನೋಯ್ ಹಾಗೂ ಕಯಾಕಿಂಗ್ನ ಸ್ಲಾಲೊಮ್ ಸಿ1 ವಿಭಾಗದಲ್ಲಿ ದಾದಾಫೀರ್ 3ನೇ ಸ್ಥಾನಿಯಾಗಿ ಕಂಚಿಗೆ ಕೊರಳೊಡ್ಡಿದರು.
ಇದೇ ವೇಳೆ ಪುರುಷರ ತಂಡ ವಿಭಾಗದ ಟೆನಿಸ್ ಕ್ವಾರ್ಟರ್ ಫೈನಲ್ನಲ್ಲಿ ತೆಲಂಗಾಣ ವಿರುದ್ಧ ಕರ್ನಾಟಕ 2-0 ಗೆಲುವು ಸಾಧಿಸಿತು. ಆದರೆ ಮಹಿಳಾ ಹಾಕಿ ಗುಂಪು ಹಂತದಲ್ಲಿ ಕರ್ನಾಟಕ ತಂಡ ಹರ್ಯಾಣ ವಿರುದ್ಧ 0-4 ಗೋಲುಗಳಿಂದ ಸೋಲನುಭವಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.