
ರಾಂಚಿ(ಅ.26): ಇಂದು ರಾಂಚಿಯಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 4ನೇ ಏಕದಿನ ಪಂದ್ಯ ನಡೆಯಲಿದೆ. ಟೀಮ್ ಇಂಡಿಯಾ ಇನ್ನೊಂದು ಪಂದ್ಯ ಬಾಕಿ ಇರುವಾಗ್ಲೇ ಸರಣಿ ಗೆಲ್ಲಲು ಎದುರು ನೋಡುತ್ತಿದೆ.
ಅತ್ತ ಕಿವೀಸ್ ಸರಣಿಯಲ್ಲಿ ಸಮಬಲ ಸಾಧಿಸಲು ಕಾದು ಕುಳಿತಿದೆ. ಮೊದಲ ಮೂರು ಪಂದ್ಯವಾಡಿದ ತಂಡವನ್ನೇ ಧೋನಿ ಕಣಕ್ಕಿಳಿಸುವ ಸಾಧ್ಯತೆ ಇದೆ. ಇನ್ನು ರಾಂಚಿಯಲ್ಲಿ ಟೀಮ್ ಇಂಡಿಯಾ ಸೋತೇ ಇಲ್ಲ.
ತನ್ನ ಅಜೇಯ ಓಟವನ್ನ ಮುಂದುವರೆಸಿಕೊಂಡು ಹೋಗಲು ಪ್ಲಾನ್ ಮಾಡುತ್ತಿದೆ. ಧೋನಿ ತವರೂರು ಆಗಿರೋದ್ರಿಂದ ಸಾಕಷ್ಟು ಕ್ರಿಕೆಟ್ ಫ್ಯಾನ್ಸ್ ಸೇರಲಿದ್ದಾರೆ. ವಿರಾಟ್ ಕೊಹ್ಲಿ ಆಡಿರುವ ಎರಡು ಪಂದ್ಯದಲ್ಲಿ ಒಂದು ಶತಕ, ಒಂದು ಅರ್ಧಶತಕ ದಾಖಲಿಸಿದ್ದಾರೆ. ಹೀಗಾಗಿ ಈ ಪಂದ್ಯದಲ್ಲೂ ಅವರೇ ಟ್ರಂಪ್ಕಾರ್ಡ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.