ಕಿವೀಸ್ ಪಡೆಯನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿದ ಟೀಂ ಇಂಡಿಯಾ

Published : Oct 25, 2017, 05:28 PM ISTUpdated : Apr 11, 2018, 12:55 PM IST
ಕಿವೀಸ್ ಪಡೆಯನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿದ ಟೀಂ ಇಂಡಿಯಾ

ಸಾರಾಂಶ

ಭಾರತದ ಪರ ಭುವನೇಶ್ವರ್ ಕುಮಾರ್ 3 ವಿಕೆಟ್ ಪಡೆದರೆ, ಯುಜುವೇಂದ್ರ ಚಾಹಲ್ ಹಾಗೂ ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಹಂಚಿಕೊಂಡರು.

ಪುಣೆ(ಅ.25): ಸಂಘಟಿತ ಬೌಲಿಂಗ್ ಪ್ರದರ್ಶನದ ನೆರವಿನಿಂದ ನ್ಯೂಜಿಲೆಂಡ್ ತಂಡವನ್ನು ಕೇವಲ 230 ರನ್'ಗಳಿಗೆ ಕಟ್ಟಿಹಾಕುವಲ್ಲಿ ಟೀಂ ಇಂಡಿಯಾದ ಬೌಲರ್'ಗಳು ಯಶಸ್ವಿಯಾಗಿದ್ದಾರೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಕಿವೀಸ್ ಪಡೆಗೆ ಭಾರತದ ವೇಗಿಗಳು ಆರಂಭದಲ್ಲೇ ಶಾಕ್ ನೀಡಿದರು. ಪಂದ್ಯದ ಮೂರನೇ ಓವರ್'ನಲ್ಲಿ ಮಾರ್ಟಿನ್ ಗುಪ್ಟಿಲ್'ಗೆ ಭುವನೇಶ್ವರ್ ಪೆವಿಲಿಯನ್ ಹಾದಿ ತೋರಿಸಿದರು. ಇದರ ಬೆನ್ನಲ್ಲೇ ನಾಯಕ ಕೇನ್ ವಿಲಿಯಮ್ಸನ್ ಅವರನ್ನು ಬುಮ್ರಾ ಎಲ್'ಬಿ ಬಲೆಗೆ ಸಿಲುಕಿಸುವಲ್ಲಿ ಯಶಸ್ವಿಯಾದರು. ಮತ್ತೋರ್ವ ಆರಂಭಿಕ ಕಾಲಿನ್ ಮನ್ರೋ ಅವರನ್ನು ಭುವಿ ಕ್ಲೀನ್ ಬೌಲ್ಡ್ ಮಾಡಿದಾಗ ನ್ಯೂಜಿಲೆಂಡ್ ತಂಡದ ಮೊತ್ತ 27 ಆಗಿತ್ತು.

ಈ ವೇಳೆ ತಂಡಕ್ಕೆ ಚೇತರಿಕೆ ನೀಡಲು ಕಳೆದ ಪಂದ್ಯದ ಹೀರೋಗಳಾದ ರಾಸ್ ಟೇಲರ್ ಹಾಗೂ ಟಾಮ್ ಲಾಥಮ್ ಯತ್ನಿಸಿದರಾದರೂ ಅವರಿಗೆ ಭದ್ರವಾಗಿ ಬೇರೂರಲು ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಅವಕಾಶ ಮಾಡಿಕೊಡಲಿಲ್ಲ. ಟೇಲರ್(21)ಗೆ ಪಾಂಡ್ಯ ಶಾಕ್ ಕೊಟ್ಟರೆ, ಲಾಥಮ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವಲ್ಲಿ ಅಕ್ಷರ್ ಪಟೇಲ್ ಯಶಸ್ವಿಯಾದರು. ಮಧ್ಯಮ ಕ್ರಮಾಂಕದಲ್ಲಿ ಹೆನ್ರಿ ನಿಕೋಲಸ್ ಹಾಗೂ ಕಾಲಿನ್ ಡಿ ಗ್ರಾಂಡ್'ಹೋಂ 47 ರನ್'ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು 200ರ ಸಮೀಪ ಕೊಂಡ್ಯೊಯ್ದರು. ಇನ್ನೂ ಕೆಳಕ್ರಮಾಂಕದಲ್ಲಿ ಮೈಕಲ್ ಸ್ಯಾಂಟರ್(29) ಹಾಗೂ ಥೀಮ್ ಸೌಥಿ(25*) ತಂಡವನ್ನು 200ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

ಭಾರತದ ಪರ ಭುವನೇಶ್ವರ್ ಕುಮಾರ್ 3 ವಿಕೆಟ್ ಪಡೆದರೆ, ಯುಜುವೇಂದ್ರ ಚಾಹಲ್ ಹಾಗೂ ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಹಂಚಿಕೊಂಡರು.

ಸಂಕ್ಷಿಪ್ತ ಸ್ಕೋರ್:

ನ್ಯೂಜಿಲೆಂಡ್: 230/9

ಹೆನ್ರಿ ನಿಕೋಲಸ್: 42

ಕಾಲಿನ್ ಡಿ ಗ್ರಾಂಡ್'ಹೋಂ: 41

ಭುವನೇಶ್ವರ್ ಕುಮಾರ್ : 45/3

ವಿವರ ಅಪೂರ್ಣ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಆಯೋಜಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್; ಅಭಿಮಾನಿಗಳು ಹೇಳಿದ್ದೇನು?
ಇನ್ನು ಆರು ತಿಂಗಳು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಔಟ್! ಈ ಸರಣಿಯಲ್ಲಿ ರೋ-ಕೋ ಜೋಡಿ ಕಮ್‌ಬ್ಯಾಕ್