
ನವದೆಹಲಿ(ಮೇ.02): ಐಸಿಸಿ ವಿಶ್ವಕಪ್ ಟೂರ್ನಿಗೆ ಅಂತಿಮ ಕಸರತ್ತು ನಡೆಯುತ್ತಿದೆ. ಟೂರ್ನಿಗೆ ಆಯ್ಕೆಯಾಗಿದ್ದ ಏಕೈಕ ಭಾರತದ ಅಂಪೈರ್ ಎಸ್ ರವಿಗೆ ಇದೀಗ ಸಂಕಷ್ಠ ಶುರುವಾಗಿದೆ. ಎಲೈಟ್ ಅಂಪೈರ್ ಸಮಿತಿಯಿಂದ ಭಾರತದ ಎಸ್.ರವಿಯನ್ನು ಕೈಬಿಡಲು ಐಸಿಸಿ ನಿರ್ಧರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇದನ್ನೂ ಓದಿ: ಬಿಡುವಿಲ್ಲದ ಕ್ರಿಕೆಟ್: ಭಾರತ- ವಿಂಡೀಸ್ ಸರಣಿ ಮುಂದೂಡಿಕೆ!
ಏಕದಿನ ವಿಶ್ವಕಪ್ಗೆ ಆಯ್ಕೆಯಾಗಿರುವ ಭಾರತದ ಏಕೈಕ ಅಂಪೈರ್ ಎನಿಸಿರುವ ರವಿ, ವಿಶ್ವಕಪ್ ಬಳಿಕ ಪ್ರಕಟಗೊಳ್ಳಲಿರುವ ನೂತನ ಪಟ್ಟಿಯಿಂದ ಹೊರಬೀಳುವುದು ಬಹುತೇಕ ಖಚಿತವಾಗಿದೆ. ವರ್ಷದುದ್ದಕ್ಕೂ ಅಂಪೈರ್ಗಳ ಪ್ರದರ್ಶನದ ಮೇಲೆ ಐಸಿಸಿ ಕಣ್ಣಿಡಲಿದ್ದು, ಕಳಪೆ ಅಂಪೈರಿಂಗ್ನಿಂದ ರವಿ ಸಾಕಷ್ಟುಅಂಕ ಕಳೆದುಕೊಂಡು ಕೊನೆ ಸ್ಥಾನದಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.