
ಸಿಡ್ನಿ(ಮಾ.22): ಪುಣೆಯಲ್ಲಿ ಅನಿರೀಕ್ಷಿತ ಸೋಲು ಬಳಿಕ ಭಾರತ ತಂಡ ಸರಣಿ ಕಳೆದುಕೊಳ್ಳುವ ಭೀತಿಯಿಂದಾಗಿ ಅನಗತ್ಯ ಮಾತಿನ ಚಕಮಕಿಗಳನ್ನು ನಡೆಸುತ್ತಿದೆ ಎಂದು ಗಾಯಗೊಂಡು ಸರಣಿಯಿಂದ ಹೊರಬಿದ್ದ ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್ ಹೇಳಿದ್ದಾರೆ.
‘ನಮ್ಮಿಂದ ಈ ಮಟ್ಟದ ಪ್ರದರ್ಶನವನ್ನು ಭಾರತ ನಿರೀಕ್ಷಿಸಿರಲಿಲ್ಲ. ಆಘಾತಕೊಳಗಾಗಿರುವ ವಿರಾಟ್ ಪಡೆ, ಗೆಲ್ಲಲು ಇತರೆ ದಾರಿಗಳನ್ನು ಹುಡುಕುತ್ತಿದೆ’ ಎಂದು ಸ್ಟಾರ್ಕ್ ಟೀಕಿಸಿದ್ದಾರೆ.
ಬೆಂಗಳೂರು ಟೆಸ್ಟ್ ವೇಳೆ ಗಾಯಗೊಂಡು ತವರಿಗೆ ಮರಳಿರುವ ಸ್ಟಾರ್ಕ್, ಜೂನ್'ನಲ್ಲಿ ಇಂಗ್ಲೆಂಡ್'ನಲ್ಲಿ ಜರುಗಲಿರುವ ಚಾಂಪಿಯನ್ಸ್ ಟ್ರೋಫಿಯ ವೇಳೆಗೆ ತಂಡಕ್ಕೆ ಕಮ್'ಬ್ಯಾಕ್ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.