
ಬೆಂಗಳೂರು(ಜೂನ್.14): ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಅಫ್ಘಾನಿಸ್ತಾನ ವಿರುದ್ಧದ ಐತಿಹಾಸಿಕ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಮೊದಲ ದಿನ ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಭಾರತ, ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ. ಆದರೆ ದಿಢೀರ್ ಸುರಿದ ಮಳೆಯಿಂದಾಗಿ ಮೊದಲ ದಿನದಾಟ ತಾತ್ಕಾಲಿಕ ಸ್ಥಗಿತಗೊಂಡಿದೆ.
45.1 ಓವರ್ಗಳಲ್ಲಿ ಭಾರತ 1 ವಿಕೆಟ್ ಕಳೆದುಕೊಂಡು 241 ರನ್ ಗಳಿಸಿತ್ತು. ಮುರಳಿ ವಿಜಯ್ ಅಜೇ.ಯಯ 94 ರನ್ ಸಿಡಿಸಿ ಶತಕದತ್ತ ಮುನ್ನಗ್ಗುತ್ತಿದ್ದರೆ, ಕನ್ನಡಿಗ ಕೆಎಲ್ ರಾಹುಲ್ ಅಜೇಯ 33 ರನ್ ಸಿಡಿಸಿದ್ದರು. ಆದರೆ ಈ ವೇಳೆ ಸುರಿದ ಮಳೆಯಿಂದಾಗಿ ಮೊದಲ ದಿನದಾಟ ಸ್ಥಗಿತಗೊಂಡಿದೆ.
ಇಂಡೋ-ಅಫ್ಘಾನ್ ಟೆಸ್ಟ್: 200 ರನ್ ಗಡಿ ದಾಟಿದ ಟೀಂಇಂಡಿಯಾ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.