
ದೆಹಲಿ(ಮಾ.12): ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ದೆಹಲಿ ಪಂದ್ಯ ಕುತೂಹಲ ಹೆಚ್ಚಿಸಿದೆ. ಆರಂಭಿಕ 2 ಪಂದ್ಯದಲ್ಲಿ ಕೊಹ್ಲಿ ಸೈನ್ಯ ಗೆಲುವಿನ ನಗೆ ಬೀರಿದ್ದರೆ, 3 ಮತ್ತು 4ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಅಬ್ಬರಿಸಿದೆ. ಹೀಗಾಗಿ ಅಂತಿಮ ಪಂದ್ಯ ಸರಣಿ ನಿರ್ಧರಿಸಲಿದೆ. 5ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಲು 3 ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬೇಕಿದೆ.
ಇದನ್ನೂ ಓದಿ: ಇಂಡೋ-ಆಸಿಸ್ ಏಕದಿನ: ನಿರ್ಣಾಯಕ ಪಂದ್ಯಕ್ಕೆ ಹೇಗಿರಲಿದೆ ಕೊಹ್ಲಿ ಸೈನ್ಯ?
1 ಫೀಲ್ಡಿಂಗ್
ರಾಂಚಿ ಹಾಗೂ ಮೊಹಾಲಿ ಪಂದ್ಯದಲ್ಲಿ ಟೀಂ ಇಂಡಿಯಾ ಫೀಲ್ಡಿಂಗ್ ಕಳಪೆಯಾಗಿತ್ತು. ಆದರಲ್ಲೂ ಮೊಹಾಲಿ ಪಂದ್ಯದಲ್ಲಿ ಫೀಲ್ಡಿಂಗ್ನಲ್ಲಿ ಮಾಡಿದ ತಪ್ಪುಗಳೇ ಸೋಲಿಗೆ ಕಾರಣವಾಯಿತು. ಹೀಗಾಗಿ ಅಂತಿಮ ಪಂದ್ಯದಲ್ಲಿ ಫೀಲ್ಡಿಂಗ್ ಸುಧಾರಿಸಿಕೊಳ್ಳಬೇಕಿದೆ.
ಇದನ್ನೂ ಓದಿ: ಧೋನಿ ಇಲ್ಲದ ಕೊಹ್ಲಿ ಟೀಂ ಡಮ್ಮಿ: ವಿರಾಟ್ ಒಪ್ಪಿಕೊಂಡ ಸತ್ಯವಿದು..!
2 ಟಾಸ್ಗೂ ಮೊದಲೇ ಪಿಚ್ ಅರ್ಥಮಾಡಿಕೊಳ್ಳಬೇಕು
ಕಳೆದೆರಡು ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಆತುರದ ನಿರ್ಧಾರ ತೆಗೆದುಕೊಂಡಿದ್ದಾರೆ. ಟಾಸ್ಗೂ ಮೊದಲೇ ಪಿಚ್ ಅರ್ಥಮಾಡಿಕೊಳ್ಳಬೇಕಿದೆ. ಪಿಚ್ ಹಾಗೂ ಕಂಡೀಷನ್ಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಬೇಕು.
ಇದನ್ನೂ ಓದಿ: ಮೊಹಾಲಿ ಗೆಲುವಿನ ಬೆನ್ನಲ್ಲೇ ಆಸಿಸ್’ಗೆ ಆಘಾತ: ಸ್ಟಾರ್ ಆಟಗಾರ ಔಟ್..?
3 ಎದುರಾಳಿಯ ಜೊತೆಯಾಟದ ಅವಕಾಶಕ್ಕೆ ಬ್ರೇಕ್
ಮಿಡ್ಲ್ ಓವರ್ಗಳಲ್ಲಿ ಎದುರಾಳಿಗಳು ನಿರಾಯಾಸವಾಗಿ ರನ್ ಕಲೆಹಾಕುತ್ತಿದ್ದಾರೆ. ಜೊತೆಗೆ ಅತ್ಯುತ್ತಮ ಜೊತೆಯಾಟ ನೀಡೋ ಮೂಲಕ ಬೃಹತ್ ಮೊತ್ತಕ್ಕೆ ಕಾರಣರಾಗುತ್ತಿದ್ದಾರೆ. ಈ ವೇಳೆ ಬೌಲರ್ಗಳ ರೊಟೇಶನ್ ಹಾಗೂ ಎದುರಾಳಿ ಬ್ಯಾಟ್ಸ್ಮನ್ ವೀಕ್ನೆಸ್ ಮೇಲೆ ದಾಳಿ ಮಾಡಿ ಜೊತೆಯಾಟಕ್ಕೆ ಬ್ರೇಕ್ ಹಾಕಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.