
ಬೆಂಗಳೂರು(ಫೆ.02): ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಳೆ(ಫೆ.03) 5ನೇ ಹಾಗೂ ಅಂತಿಮ ಏಕದಿನ ಪಂದ್ಯ ಆಡಲಿದೆ. ಬಳಿಕ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ದದ ಟಿ20 ಹಾಗೂ ಏಕದಿನ ಸರಣಿ ಆಡಲಿದೆ. ಆಸಿಸ್ ವಿರುದ್ಧದ ಮೊದಲ ಟಿ20 ಪಂದ್ಯ ಫೆಬ್ರವರಿ 24 ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಇದೀಗ ಚಿನ್ನಸ್ವಾಮಿ ಕ್ರೀಡಾಂಗಣ ಮೊದಲ ಪಂದ್ಯದ ಬದಲು 2ನೇ ಟಿ20 ಪಂದ್ಯಕ್ಕೆ ಆತಿಥ್ಯವಹಿಸಲಿದೆ.
ಇದನ್ನೂ ಓದಿ: ಇಂಡೋ-ಕಿವೀಸ್ ಲಾಸ್ಟ್ ಫೈಟ್: ಯಾರಿಗೆಲ್ಲಾ ಸಿಗಬಹುದು ಚಾನ್ಸ್..?
ಫೆಬ್ರವರಿ 20 ರಿಂದ 24ರ ವರೆಗೆ ಬೆಂಗಳೂರಿನಲ್ಲಿ ಪ್ರತಿಷ್ಠಿತ ಏರ್ ಶೋ ಆಯೋನೆಗೊಳ್ಳುತ್ತಿದೆ. ಹೀಗಾಗಿ ಫೆ.24ರ ಆಸಿಸ್ ವಿರುದ್ದದ ಮೊದಲ ಟಿ20 ಪಂದ್ಯಕ್ಕೆ ಭದ್ರತೆ ನೀಡಲು ಅಸಾಧ್ಯ ಎಂದು ಪೊಲೀಸ್ ಇಲಾಖೆ ಹೇಳಿತ್ತು. ಹೀಗಾಗಿ ಕರ್ನಾಟರ ರಾಜ್ಯ ಕ್ರಿಕೆಟ್ ಸಂಸ್ಥೆ(KSCA) ಬಿಸಿಸಿಐಗೆ ಪಂದ್ಯ ಸ್ಥಳಾಂತರಿಸಲು ಮನವಿ ಮಾಡಿತ್ತು. KSCA ಮನವಿಗೆ ಸ್ಪಂದಿಸಿರುವ ಬಿಸಿಸಿಐ, ಮೊದಲ ಪಂದ್ಯವನ್ನ ವಿಶಾಖಪಟ್ಟಂಗೆ ಸ್ಥಳಾಂತರಿಸಿದೆ. ಇನ್ನು ಫೆಬ್ರವರಿ 27 ರಂದು ನಡೆಯಲಿರುವ 2ನೇ ಪಂದ್ಯವನ್ನ ಬೆಂಗಳೂರು ಆತಿಥ್ಯ ವಹಿಸಲಿದೆ.
ಇದನ್ನೂ ಓದಿ: KL ರಾಹುಲ್ ಬಗ್ಗೆ ರಾಹುಲ್ ದ್ರಾವಿಡ್ ಹೇಳಿದ್ದೇನು..?
ನೂತನ ವೇಳಾಪಟ್ಟಿ
| ಫೆ.24 | 1ನೇ ಟಿ20 | ವೈಝಾಗ್ |
| ಫೆ.27 | 2ನೇ ಟಿ20 | ಬೆಂಗಳೂರು |
ಬೆಂಗಳೂರು ಪಂದ್ಯವನ್ನ ವೈಝಾಗ್ ಹಾಗೂ ವೈಝಾಗ್ ಪಂದ್ಯವನ್ನ ಬೆಂಗಳೂರಿಗೆ ಅದಲು ಬದಲು ಮಾಡೋ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಂಡಿದೆ. ಮನವಿಗೆ ಸ್ಪಂಧಿಸಿದ ಬಿಸಿಸಿಐಗೆ, ಕರ್ನಾಟ ರಾಜ್ಯ ಕ್ರಿಕೆಟ್ ಸಂಸ್ಥೆ ಧನ್ಯವಾದ ಹೇಳಿದೆ. ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 2 ಟಿ20 ಹಾಗೂ 5 ಏಕದಿನ ಪಂದ್ಯ ಆಡಲಿದೆ. ಮಾರ್ಚ್ 13 ರಂದು ಅಂತಿಮ ಹಾಗೂ 5ನೇ ಏಕದಿನ ಪಂದ್ಯದೊಂದಿಗೆ ಆಸಿಸ್ ವಿರುದ್ದದ ಸರಣಿ ಅಂತ್ಯಗೊಳ್ಳಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.