
ಬೆಂಗಳೂರು(ಫೆ.21): ಆಸ್ಟ್ರೇಲಿಯಾ ವಿರುದ್ದದ ಟಿ20 ಹಾಗೂ ಏಕದಿನ ಸರಣಿಗೆ ಟೀಂ ಇಂಡಿಯಾ ತಯಾರಿ ಆರಂಭಿಸಿದೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಕ್ರಿಕೆಟಿಗರು ತರಬೇತಿ ಆರಂಭಿಸಿದ್ದಾರೆ. ಸರಣಿಗೆ ಇನ್ನು 3 ದಿನ ಬಾಕಿ ಇರುವಾಗಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದಿಂದ ಸ್ಟಾರ್ ಆಟಗಾರ ಹೊರಬಿದ್ದಿದ್ದಾರೆ.
ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಟಿ20, ಏಕದಿನ ಸರಣಿ ವೇಳಾಪಟ್ಟಿ ಇಲ್ಲಿದೆ!
ಬೆನ್ನು ನೋವಿಗೆ ತುತ್ತಾಗಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಬಿದ್ದಿದ್ದಾರೆ. ಟೀಂ ಇಂಡಿಯಾ ವೈದ್ಯಕೀಯ ತಂಡ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲು ಸೂಚಿಸಿದೆ. ಹೀಗಾಗಿ ಪಾಂಡ್ಯ ಟಿ20 ಹಾಗೂ ಏಕದಿನ ಸರಣಿಯಿಂದ ಹೊರಬಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿಗೆ ಹಾರ್ದಿಕ್ ಬದಲು ತಂಡಕ್ಕೆ ರವೀಂದ್ರ ಜಡೇಜಾ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ:ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ!
2019ರ ವಿಶ್ವಕಪ್ ಟೂರ್ನಿ ದೃಷ್ಠಿಯಿಂದ ಆಸ್ಟ್ರೇಲಿಯಾ ವಿರುದ್ದದ ಸರಣಿ ಟೀಂ ಇಂಡಿಯಾ ಕ್ರಿಕೆಟಿಗರ ಪಾಲಿಗೆ ಮುಖ್ಯವಾಗಿದೆ. ಆಸಿಸ್ ಸರಣಿಯಲ್ಲಿ ಮಿಂಚಿದ ಕ್ರಿಕೆಟಿಗರು ವಿಶ್ವಕಪ್ ಟೂರ್ನಿಗೂ ಆಯ್ಕೆಯಾಗಲಿದ್ದಾರೆ. ಇದೀಗ ರವೀಂದ್ರ ಜಡೇಜಾ ವಿಶ್ವಕಪ್ ತಂಡದ ಆಯ್ಕೆ ಆಸೆ ಜೀವಂತವಾಗಿದ್ದರೆ, ಹಾರ್ದಿಕ್ ಪಾಂಡ್ಯಗೆ ಇಂಜುರಿ ಸಮಸ್ಯೆ ಅಡ್ಡವಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.