
ರಾಂಚಿ(ಮಾ.09): ಆಸ್ಟ್ರೇಲಿಯಾ ವಿರುದ್ಧದ ರಾಂಚಿ ಪಂದ್ಯ ಸೋತ ಭಾರತ ಇದೀಗ 4ನೇ ಪಂದ್ಯದ ಗೆಲುವಿಗೆ ಗೇಮ್ ಪ್ಲಾನ್ ರೂಪಿಸುತ್ತಿದೆ. ಸದ್ಯ ಟೀಂ ಇಂಡಿಯಾ 2-1 ಅಂತರದ ಮುನ್ನಡೆಯಲ್ಲಿದೆ. ಇದೀಗ ಅಂತಿಮ 2 ಏಕದಿನ ಪಂದ್ಯಗಳಿಗೆ ತಂಡದಲ್ಲಿ ಬದಲಾವಣೆ ಮಾಡಲು ಟೀಂ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.
ಇದನ್ನೂ ಓದಿ: ರಾಂಚಿ ಪಂದ್ಯ ಸೋತರೂ ಭಾರತೀಯರ ಮನ ಗೆದ್ದ ಟೀಂ ಇಂಡಿಯಾ!
ಆಸ್ಪ್ರೇಲಿಯಾ ವಿರುದ್ಧ ಅಂತಿಮ 2 ಏಕದಿನ ಪಂದ್ಯಗಳಿಗೆ ಎಂ.ಎಸ್.ಧೋನಿಗೆ ವಿಶ್ರಾಂತಿ ನೀಡುವುದಾಗಿ ಭಾರತ ತಂಡದ ಬ್ಯಾಟಿಂಗ್ ಕೋಚ್ ಸಂಜಯ್ ಬಾಂಗರ್ ತಿಳಿಸಿದ್ದಾರೆ. 3ನೇ ಏಕದಿನದಲ್ಲಿ ತಂಡ ಸೋಲುಂಡ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಧೋನಿ ವಿಶ್ರಾಂತಿ ಬಯಸಿದ್ದಾರೆ ಎನ್ನುವ ವಿಚಾರ ಬಹಿರಂಗಗೊಳಿಸಿದರು.
ಇದನ್ನೂ ಓದಿ: INDvsAUS:ಹುತಾತ್ಮ ಯೋಧರಿಗೆ ವೀಕ್ಷಕ ವಿವರಣೆಗಾರರ ಸಲಾಂ!
ಧೋನಿ ಸ್ಥಾನದಲ್ಲಿ ರಿಷಭ್ ಪಂತ್ ಆಡಲಿದ್ದಾರೆ. ಮಾರ್ಚ್ 10 ರಂದು ಮೊಹಾಲಿಯಲ್ಲಿ 4ನೇ ಏಕದಿನ ಪಂದ್ಯ ಆಯೋಜಿಸಿದ್ದರೆ, 5ನೇ ಹಾಗೂ ಅಂತಿಮ ಏಕದಿನ ಪಂದ್ಯ ದೆಹಲಿಯಲ್ಲಿ ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.