
ನಾಗ್ಪುರ(ಮಾ.04): ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿಯಲ್ಲಿ ಶುಭಾರಂಭ ಮಾಡಿರುವ ಟೀಂ ಇಂಡಿಯಾ ಇದೀಗ 2ನೇ ಪಂದ್ಯಕ್ಕೆ ಸಜ್ಜಾಗಿದೆ. ಹೈದರಾಬಾದ್ನಲ್ಲಿ ನಡೆದ ಮೊದಲ ಏಕದಿನದಲ್ಲಿ ಭಾರತ 6 ವಿಕೆಟ್ ಗೆಲುವು ಸಾಧಿಸಿತ್ತು. ಇದೀಗ ನಾಗ್ಪುರದಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲೂ ಗೆಲವಿನ ವಿಶ್ವಾಸದಲ್ಲಿದೆ.
ಇದನ್ನೂ ಓದಿ: ಸುರೇಶ್ ರೈನಾ ದಾಖಲೆ ಮುರಿದ ಸ್ಮೃತಿ ಮಂಧನಾ
ದ್ವಿತೀಯ ಪಂದ್ಯಕ್ಕೆ ನಾಯಕ ವಿರಾಟ್ ಕೊಹ್ಲಿ ತಂಡದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ. ಮೊದಲ ಪಂದ್ಯದಲ್ಲಿ ನಿರಾಸೆ ಮೂಡಿಸಿದ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಬದಲು ಕನ್ನಡಿಗ ಕೆ.ಎಲ್.ರಾಹುಲ್ಗೆ ಅವಕಾಶ ನೀಡುವ ಸಾಧ್ಯತೆ ಇದೆ.
ಇದನ್ನೂ ಓದಿ: ಪಾಕಿಸ್ತಾನಕ್ಕೆ ಮತ್ತೊಂದು ಶಾಕ್- PSL ಟೂರ್ನಿಯಿಂದ ಡಿವಿಲಿಯರ್ಸ್ ವಾಪಾಸ್!
ಸಂಭವನೀಯ ತಂಡ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ಅಂಬಾಟಿ ರಾಯುಡು, ಎಂ.ಎಸ್.ಧೋನಿ,ಕೇದಾರ್ ಜಾಧವ್, ವಿಜಯ್ ಶಂಕರ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.