
ಸಿಡ್ನಿ(ಜ.08): ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಸರಣಿ ಗೆದ್ದಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿಗಾಗಿ ಗೇಮ್ ಪ್ಲಾನ್ ರೂಪಿಸಿದೆ. 3 ಪಂದ್ಯಗಳ ಏಕದಿನ ಸರಣಿಯಿಂದ ಟೀಂ ಇಂಡಿಯಾ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಸತತ ಪಂದ್ಯ ಆಡಿರುವ ಬುಮ್ರಾಗೆ ರೆಸ್ಟ್ ಅಗತ್ಯವಿದೆ ಎಂದು ಬಿಸಿಸಿಐ ಹೇಳಿದೆ. ಆಸಿಸ್ ವಿರುದ್ದ ಬಳಿಕ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಸರಣಿಗೂ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ.
"
ಇದನ್ನೂ ಓದಿ: ಇಂಡೋ-ಆಸಿಸ್ ಸರಣಿ: ತಪ್ಪು ಭವಿಷ್ಯ ನುಡಿದ ರಿಕಿ ಪಾಂಟಿಂಗ್ ಫುಲ್ ಟ್ರೋಲ್!
ವೇಗಿ ಬುಮ್ರಾ ಸ್ಥಾನಕ್ಕೆ ಇದೀಗ ಯುವ ವೇಗಿ ಮೊಹಮ್ಮದ್ ಸಿರಾಜ್ಗೆ ಬುಲಾವ್ ನೀಡಲಾಗಿದೆ. ಹೈದರಾಬಾದ್ ಮೂಲದ ವೇಗಿ ದೇಸಿ ಟೂರ್ನಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಟೀಂ ಇಂಡಿಯಾ 3 ಏಕದಿನ ಪಂದ್ಯ ಆಡಿರುವ ಸಿರಾಜ್ 3 ವಿಕೆಟ್ ಕಬಳಿಸಿದ್ದಾರೆ. ಇದೀಗ ಏಕದಿನ ತಂಡಕ್ಕೂ ಪಾದರ್ಪಣೆ ಮಾಡೋ ವಿಶ್ವಾಸದಲ್ಲಿದ್ದಾರೆ.
ಇದನ್ನೂ ಓದಿ: ಟೀಂ ಇಂಡಿಯಾ ಅಭಿನಂದಿಸಿ ಟ್ರೋಲ್ ಆದ ಪ್ರೀತಿ ಜಿಂಟಾ!
ಜನವರಿ 12ರಿಂದ ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿ ಆರಂಭವಾಗಲಿದೆ. 3 ಪಂದ್ಯದ ಸರಣಿಯಲ್ಲೂ ಟೀಂ ಇಂಡಿಯಾ ಗೆಲುವಿನ ವಿಶ್ವಾಸದಲ್ಲಿದೆ. ಈಗಾಗಲೇ ಟೆಸ್ಟ್ ಸರಣಿಯಲ್ಲಿ ಭಾರತ 2-1 ಅಂತರದ ಗೆಲುವು ಸಾಧಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.