INDvsAUS:ಹುತಾತ್ಮ ಯೋಧರಿಗೆ ವೀಕ್ಷಕ ವಿವರಣೆಗಾರರ ಸಲಾಂ!

Published : Mar 08, 2019, 03:08 PM IST
INDvsAUS:ಹುತಾತ್ಮ ಯೋಧರಿಗೆ ವೀಕ್ಷಕ ವಿವರಣೆಗಾರರ ಸಲಾಂ!

ಸಾರಾಂಶ

ರಾಂಚಿಯಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಏಕದಿನ ಪಂದ್ಯ ಹುತಾತ್ಮ ಯೋಧರಿಗೆ ಅರ್ಪಿಸಲಾಗಿದೆ. ಪಂದ್ಯದ ಸಂಭಾವನೆ ಕೂಡ ಹುತಾತ್ಮ ಯೋಧರ ಕುಟಂಬಕ್ಕೆ ನೀಡಲಾಗಿದೆ. ಟೀಂ ಇಂಡಿಯಾ ಕ್ರಿಕೆಟಿಗರು ಗೌರವ ಸೂಚಿಸಿದ ಬೆನ್ನಲ್ಲೇ, ಪಂದ್ಯದ ವೀಕ್ಷಕ ವಿವರಣೆಗಾರರು ಭಾರತೀಯ ಸೇನೆಗೆ ಗೌರವ ಸೂಚಿಸಿದ್ದಾರೆ.  

ರಾಂಚಿ(ಮಾ.08): ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಏಕದಿನ ಪಂದ ಹಲವು ಸ್ಮರಣೀಯ ಘಟನೆಗಳಿಗೆ ಸಾಕ್ಷಿಯಾಗಿದೆ. ರಾಂಚಿ ಪಂದ್ಯಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರು ಭಾರತೀಯ ಸೇನೆಯ ಕ್ಯಾಪ್ ಧರಿಸಿ ಕಣಕ್ಕಿಳಿದಿದ್ದಾರೆ. ಈ ಮೂಲಕ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸೂಚಿಸಿದರೆ, ಇದೀಗ ಪಂದ್ಯದ ವೀಕ್ಷಕ ವಿವರಣೆಗಾರರು ಗೌರವ ಸೂಚಿಸಿದ್ದಾರೆ.

ಇದನ್ನೂ ಓದಿ: ರಾಂಚಿ ಪಂದ್ಯವನ್ನು ಸೈನಿಕರಿಗೆ ಅರ್ಪಿಸಿದ ಟೀಂ ಇಂಡಿಯಾ

ರಾಂಚಿ ಪಂದ್ಯದ ವೀಕ್ಷಕ ವಿವರಣೆ ನೀಡುತ್ತಿರುವ ಹರ್ಷಾ ಬೋಗ್ಲೆ,  ಮರಳಿ ಕಾರ್ತಿಕ್, ಮ್ಯಾಥ್ಯೂ ಹೇಡನ್, ಶಿವರಾಮ ಕೃಷ್ಣನ್ ಹಾಗೂ ಸಂಜಯ್ ಮಂಜ್ರೇಕರ್‌ಗೆ ಟೀಂ ಇಂಡಿಯಾ ಮಾಜಿ ನಾಯಕ, ವೀಕ್ಷಕ ವಿವರಣೆಗಾರ ಸುನಿಲ್ ಗವಾಸ್ಕರ್ ಸೇನಾ ಕ್ಯಾಪ್ ನೀಡಿದರು. 

 

 

ಇದನ್ನೂ ಓದಿ: ಐಪಿಎಲ್ ಉದ್ಘಾಟನಾ ಸಮಾರಂಭ ರದ್ದು - ಭಾರತೀಯರ ಹೃದಯ ಗೆದ್ದ ಬಿಸಿಸಿಐ!

ಪಂದ್ಯಕ್ಕೂ ಮೊದಲು ಟೀಂ ಇಂಡಿಯಾ ಕ್ರಿಕೆಟಿಗರಿಗೆ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಕ್ಯಾಪ್ ವಿತರಿಸಿದರು. ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ 40ಕ್ಕೂ ಹೆಚ್ಚು CRPF ಯೋಧರು ಹುತಾತ್ಮರಾಗಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಭಾರತ ಏರ್‌ಸ್ಟ್ರೈಕ್ ನಡೆಸಿತ್ತು.  
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?