
ಹೈದರಾಬಾದ್(ಅ.13): ಫೈನಲ್ ಪಂದ್ಯ ಎಂದು ಬಿಂಬಿತವಾಗಿದ್ದ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ 3ನೇ ಹಾಗೂ ಅಂತಿಮ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಸರಣಿ 1-1 ರಿಂದ ಸಮಬಲಗೊಂಡು ಟ್ರೋಫಿಯನ್ನು ಇಬ್ಬರು ನಾಯಕರು ಹಂಚಿಕೊಂಡರು.
ಸಂಜೆ 7 ಗಂಟೆಯಿಂದ ಪಂದ್ಯ ಶುರುವಾಗುತ್ತೆ ಅಂತ ಕಾದು ಕುಳಿತಿದ್ದ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಪರದೆಯಲ್ಲಿ ಪಂದ್ಯ ರದ್ದಾಗಿದೆ ಎಂದು ಘೋಷಿಸುತ್ತಿದ್ದಂತೆ ಮಂಕಾಗಿ ಮನೆ ಕಡೆ ತೆರಳಿದರು. ನಿಗದಿತ ಸಮಯದಲ್ಲಿ ಮಳೆ ಬಾರದಿದ್ದರೂ ಕೆಲವು ಗಂಟೆಗಳ ಹಿಂದೆ ಸುರಿದ ಮಳೆಯಿಂದಾಗಿ ಮೈದಾನ ಒದ್ದೆಯಾಗಿದ್ದು. ಅಂತಿಮವಾಗಿ ಪಂದ್ಯ ರದ್ದುಗೊಳಿಸಲಾಗಿದೆ ಎಂದು ಪ್ರಕಟಿಸಲಾಯಿತು. ಮೊದಲ ಟಿ20ಯನ್ನು ಭಾರತ ಗೆದ್ದಿದ್ದರೆ 2ನೇ ಪಂದ್ಯವನ್ನು ಆಸ್ಟ್ರೇಲಿಯಾ ಜಯಿಸಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.