
ಬ್ರಿಸ್ಬೇನ್(ನ.21): ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿರುವ 174 ರನ್ ಬೃಹತ್ ಟಾರ್ಗೆಟ್ ಬೆನ್ನಟ್ಟುತ್ತಿರುವ ಟೀಂ ಇಂಡಿಯಾಗೆ ಶಿಖರ್ ಧವನ್ ಆಸರೆಯಾಗಿದ್ದಾರೆ. ಆದರೆ ರೋಹಿತ್ ಶರ್ಮಾ,ಕೆಎಲ್ ರಾಹುಲ್ ಹಾಗೂ ನಾಯಕ ವಿರಾಟ್ ಕೊಹ್ಲಿ ಬಹುಬೇಗನೆ ಪೆವಿಲಿಯನ್ ಸೇರಿಕೊಂಡಿದ್ದಾರೆ.
ಶಿಖರ್ ಧವನ್ ಆಕರ್ಷಕ ಅರ್ಧಶತಕ ಸಿಡಿಸಿ ಆಸರೆಯಾದರು. ಟಿ20 ಕ್ರಿಕೆಟ್ನಲ್ಲಿ 9ನೇ ಹಾಫ್ ಸೆಂಚುರಿ ಸಿಡಿಸಿದರು. ಆದರೆ ಧವನ್ಗೆ ಟೀಂ ಇಂಡಿಯಾದ ಇತರ ಯಾವ ಬ್ಯಾಟ್ಸ್ಮನ್ಗಳಿಂದಲೂ ಉತ್ತಮ ಸಾಥ್ ಸಿಗಲಿಲ್ಲ. ಧವನ್ 76 ರನ್ ಸಿಡಿಸಿ ಔಟಾದರು.
ಮಳೆಯಿಂದಾಗಿ ಪಂದ್ಯವನ್ನ 17 ಓವರ್ಗೆ ಸೀಮಿತಗೊಳಿಸಲಾಗಿದೆ. ಹೀಗಾಗಿ ಆಸ್ಟ್ರೇಲಿಯಾ 17 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 158 ರನ್ ಸಿಡಿಸಿತು. ಡಕ್ವರ್ತ್ ನಿಯಮದಿಂದಾಗಿ ಭಾರತಕ್ಕೆ 174 ರನ್ ಟಾರ್ಗೆಟ್ ನೀಡಲಾಯಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.