
ಆಡಿಲೇಡ್(ಡಿ.10): ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 31 ರನ್ ಗೆಲುವು ಸಾಧಿಸಿದೆ. ಗೆಲುವಿನ ಪ್ರಮುಖ ರೂವಾರಿ ಚೇತೇಶ್ವರ್ ಪೂಜಾರ ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ್ರು. ಈ ದಿನ ನನ್ನ ತಂದೆ ಹೆಮ್ಮೆ ಪಡುತ್ತಾರೆ. ನನ್ನ ಎಲ್ಲಾ ಯಶಸ್ಸು ಅವರಿಗೆ ಸಲ್ಲಬೇಕು ಎಂದು ಪೂಜಾರ ಹೇಳಿದ್ದಾರೆ.
ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಪೂಜಾರ, 8 ವರ್ಷ ವಯಸ್ಸಿನಿಂದ ನನಗೆ ತಂದೆ ಅಭ್ಯಾಸ ಮಾಡಿಸಿದ್ದಾರೆ. ನನ್ನ ಕ್ರಿಕೆಟ್ ಮೇಲೆ ತಂದೆ ಹೆಚ್ಚು ಆತ್ಮವಿಶ್ವಾಸ ಹೊಂದಿದ್ದರು. ನನ್ನ ತಪ್ಪುಗಳನ್ನ ಸರಿಪಡಿಸುತ್ತಿದ್ದರು. ಈ ದಿನ ತಂದೆ ಹೆಚ್ಚು ಖುಷಿ ಪಡುತ್ತಾರೆ ಎಂದು ಪೂಜಾರ ಹೇಳಿದ್ದಾರೆ.
ಆಡಿಲೇಡ್ ಟೆಸ್ಟ್ನ ಮೊದಲ ಪಂದ್ಯದಲ್ಲಿ 123 ರನ್ ಸಿಡಿಸಿದ ಪೂಜಾರ ದ್ವಿತೀಯ ಇನ್ನಿಂಗ್ಸ್ನಲ್ಲಿ 71ರನ್ ಸಿಡಿಸಿದ್ದರು. ಈ ಮೂಲಕ ಭಾರತದ ಗೆಲುವಿನ ರೂವಾರಿಯಾದರು. ಆಸಿಸ್ ಕಂಡೀಷನ್ನಲ್ಲಿ ಪೂಜಾರ ಸಾಧನೆಗೆ ಮಾಜಿ ಹಾಗೂ ದಿಗ್ಗಜ ಕ್ರಿಕೆಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.