
ಆಡಿಲೇಡ್(ಡಿ.10): ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದೆ. ಮೊದಲ ಟೆಸ್ಟ್ ಗೆಲುವಿಗೆ ಕಾರಣರಾದ ಪ್ರಮುಖ ಆಟಗಾರರಿಗೆ ನಾಯಕ ವಿರಾಟ್ ಕೊಹ್ಲಿ ಗೆಲುವಿನ ಶ್ರೇಯಸ್ಸನ್ನ ಅರ್ಪಿಸಿದ್ದಾರೆ.
ಮೊದಲ ಇನ್ನಿಂಗ್ಸ್ನಲ್ಲಿ ಸೆಂಚುರಿ ದ್ವಿತೀಯ ಇನ್ನಿಂಗ್ಸ್ನಲ್ಲಿ ಅರ್ಧಶತಕ ಸಿಡಿಸಿದ ಚೇತೇಶ್ವರ್ ಪೂಜಾರಾ, ಅತ್ಯುತ್ತಮ ಸಾಥ್ ನೀಡಿದ ಅಜಿಂಕ್ಯ ರಹಾನೆ ಹಾಗೂ ನಾಲ್ವರು ಬೌಲರ್ಗಳಿಗೆ ಈ ಗೆಲುವು ಸಲ್ಲಬೇಕು ಎಂದು ಕೊಹ್ಲಿ ಹೇಳಿದ್ದಾರೆ.
ಒತ್ತಡವಿತ್ತು, ಆದರೆ ಅದನ್ನ ತೋರ್ಪಡಿಸುವಂತಿರಲಿಲ್ಲ. ಆದರೆ ಬೌಲರ್ಗಳು ಅತ್ಯುತ್ತಮವಾಗಿ ಸ್ಪಂದಿಸಿದರು. ಹೀಗಾಗಿ ಟೆಸ್ಟ್ ಗೆಲುವು ಸಾಧ್ಯವಾಯಿತು. ಸದ್ಯ ಸರಣಿಯಲ್ಲಿ ನಾವು 1-0 ಮುನ್ನಡೆ ಸಾಧಿಸಿದ್ದೇವೆ. ಇದೇ ಪ್ರದರ್ಶನ ಮುಂದುವರಿಸೋ ಭರವಸೆ ಇದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.