
ಕೌಲಲಾಂಪುರ[ಜೂ.10]: ಹರ್ಮನ್’ಪ್ರೀತ್ ಕೌರ್[56] ಏಕಾಂಗಿ ಹೋರಾಟದ ನಡುವೆಯೂ ಬಾಂಗ್ಲಾ ಬೌಲರ್’ಗಳ ಶಿಸ್ತಿನ ದಾಳಿಯ ನೆರವಿನಿಂದ ಭಾರತ ವನಿತೆಯರ ತಂಡವನ್ನು ಕೇವಲ 112ರನ್’ಗಳಿಗೆ ನಿಯಂತ್ರಿಸಿದೆ. ಇನ್ನು ಸುಲಭ ಗುರಿ ಬೆನ್ನತ್ತಿದ ಬಾಂಗ್ಲಾದೇಶ ಉತ್ತಮ ಆರಂಭ ಪಡೆಯಿತಾದರೂ ಒಂದೇ ಓವರ್’ನಲ್ಲಿ ಬಾಂಗ್ಲಾ ಆರಂಭಿಕ ಬಲಿ ಪಡೆದ ಪೂನಂ ಯಾದವ್ ಭಾರತಕ್ಕೆ ಮುನ್ನಡೆ ಒದಗಿಸಿಕೊಟ್ಟಿದ್ದಾರೆ. 7 ಓವರ್ ಮುಕ್ತಾಯದ ವೇಳೆಗೆ ಬಾಂಗ್ಲಾ 35 ರನ್’ಗಳಿಗೆ 2 ವಿಕೆಟ್ ಕಳೆದುಕೊಂಡಿದೆ
ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾರತ ತಂಡ ಆರಂಭದಿಂದಲೇ ಕುಂಟುತ್ತಾ ಸಾಗಿತು. ತಂಡದ ಮೊತ್ತ 32 ರನ್’ಗಳಾಗುವಷ್ಟರಲ್ಲಿ ಪ್ರಮುಖ 4 ಆಟಗಾರ್ತಿಯರು ಪೆವಿಲಿಯನ್ ಸೇರಿದ್ದರು.
ಹರ್ಮನ್’ಪ್ರೀತ್ ಕೌರ್[56] ಏಕಾಂಗಿ ಹೋರಾಟ ನೆರವಿನಿಂದ ತಂಡವನ್ನು 112 ಗೌರವಾನ್ವಿತ ಮೊತ್ತ ಕಲೆಹಾಕುವಲ್ಲಿ ನೆರವಾಯಿತು. ಬಾಂಗ್ಲಾ ಪರ ಖದೀಜಾ ಹಾಗೂ ರುಮಾನ 2 ವಿಕೆಟ್ ಪಡೆದರೆ, ಜಹನರಾ ಮತ್ತು ಸಲ್ಮಾ ತಲಾ ಒಂದೊಂದು ವಿಕೆಟ್ ಪಡೆದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.