
ಸೌತಾಂಪ್ಟನ್(ಸೆ.02): 4ನೇ ಟೆಸ್ಟ್ ಪಂದ್ಯದಲ್ಲಿ 245 ರನ್ ಟಾರ್ಗೆಟ್ ಚೇಸ್ ಮಾಡುತ್ತಿರುವ ಟೀಂ ಇಂಡಿಯಾಗೆ ಇದೀಗ ನಾಯಕ ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ಆಸರೆಯಾಗಿದ್ದಾರೆ. ದಿಢೀರ್ 3 ವಿಕೆಟ್ ಕಳೆದುಕೊಂಡಿದ್ದ ಭಾರತಕ್ಕೆ ಕೊಹ್ಲಿ ಹಾಗೂ ರಹಾನೆ ಅಲ್ಪ ಚೇತರಿಕೆ ನೀಡಿದ್ದಾರೆ.
ಇಂಗ್ಲೆಂಡ್ ತಂಡವನ್ನ 2ನೇ ಇನ್ನಿಂಗ್ಸ್ನಲ್ಲಿ 271 ರನ್ಗಳಿಗೆ ಆಲೌಟ್ ಮಾಡಿ, ಕಣಕ್ಕಿಳಿದ ಟೀಂ ಇಂಡಿಯಾ ಆರಂಭದಲ್ಲೇ ಕೆಎಲ್ ರಾಹುಲ್ ವಿಕೆಟ್ ಕಳೆದುಕೊಂಡಿತು. ರಾಹುಲ್ ಶೂನ್ಯ ಸುತ್ತಿದ್ದರು. ಮೊದಲ ಇನ್ನಿಂಗ್ಸ್ನಲ್ಲಿ ಶತಕ ಸಿಡಿಸಿ ಮಿಂಚಿದ್ದ ಚೇತೇಶ್ವರ್ ಪೂಜಾರ 2ನೇ ಇನ್ನಿಂಗ್ಸ್ನಲ್ಲಿ ಕೇವಲ 5 ರನ್ ಸಿಡಿಸಿ ಔಟಾದರು.
3 ಬೌಂಡರ್ ಸಿಡಿಸಿ ಉತ್ತಮ ಪ್ರದರ್ಶನ ನೀಡೋ ಸೂಚನೆ ನೀಡಿದ ಶಿಖರ್ ಧವನ್ 17 ರನ್ ಸಿಡಿಸಿ ಔಟಾದರು. ಆದರೆ ನಾಯಕ ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ತಂಡಕ್ಕೆ ಚೇತರಿಕೆ ನೀಡಿದ್ದಾರೆ.
ಸ್ಯಾಮ್ ಕುರ್ರನ್ ಎಸೆತದಲ್ಲಿ ಎಲ್ಬಿ ಬಲೆಗೆ ಬಿದ್ದ ರಹಾನೆಗೆ ಅಂಪೈರ್ ಔಟ್ ತೀರ್ಪು ನೀಡಿದ್ದರು. ಆದರೆ ರಿವ್ಯೂವ್ ಮೂಲಕ ರಹಾನೆ ಮತ್ತೆ ಕ್ರೀಸ್ ಕಾಯ್ದುಕೊಂಡರು. ಭೋಜನ ವಿರಾಮದ ವೇಳೆ ಭಾರತ 3 ವಿಕೆಟ್ ನಷ್ಟಕ್ಕೆ 46 ರನ್ಗಳಿಸಿದೆ. ಈ ಮೂಲಕ ಗೆಲುವಿಗೆ 199 ರನ್ ಗಳಿಸಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.