
ಲಂಡನ್(ಜು.14): ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್ ನಿರ್ಧಾರಕ್ಕೆ, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಮಾರ್ಗನ್ ಬ್ಯಾಟಿಂಗ್ ಆಯ್ಕ ಮಾಡಿಕೊಳ್ಳೋ ನಿರ್ಧಾರ ಮೊದಲೇ ಹೇಳಿದ್ದರೆ, ದ್ವಿತೀಯ ಪಂದ್ಯಕ್ಕೆ ಟಾಸ್ ಅಗತ್ಯವೇ ಇರಲಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ. ಟೀಂ ಇಂಡಿಯಾ ಟಾಸ್ ಗೆದ್ದರೆ ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳೋ ನಿರ್ಧಾರ ಮಾಡಲಾಗಿತ್ತು. ಹೀಗಾಗಿ ಲಾರ್ಡ್ಸ್ ಪಂದ್ಯಕ್ಕೆ ಟಾಸ್ ಅಗತ್ಯವಿರಲಿಲ್ಲ ಎಂದು ತಮಾಷೆ ಮಾಡಿದ್ದಾರೆ.
ಟಾಸ್ ಬಳಿಕ ಮಾತನಾಡಿದ ನಾಯಕ ಕೊಹ್ಲಿ, ಟೀಂ ಇಂಡಿಯಾ ಚೇಸಿಂಗ್ ಮಾಡೋ ನಿರ್ಧಾರ ಮಾಡಿತ್ತು. ಇದಕ್ಕೆ ತಕ್ಕಂತೆ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ನಿರ್ಧಾರ ಮೊದಲೇ ಗೊತ್ತಿದ್ದರೆ ಟಾಸ್ ಹಾಕೋ ಅವಶ್ಯಕತೆ ಇರಲಿಲ್ಲ ಎಂದಿದ್ದಾರೆ.
ಇದನ್ನು ಓದಿ: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ-ಇಂದೇ ಸರಣಿ ಗೆಲುತ್ತಾ ಟೀಂ ಇಂಡಿಯಾ?
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.