
ನಾಟಿಂಗ್ಹ್ಯಾಮ್(ಆ.19): ಇಂಗ್ಲೆಂಡ್ ವಿರುದ್ದದ 3ನೇ ಟೆಸ್ಟ್ ಪಂದ್ಯದ ಮೊದಲ ದಿನ 307 ರನ್ ಸಿಡಿಸಿದ ಟೀಂ ಇಂಡಿಯಾ ದ್ವಿತೀಯ ದಿನದಾಟಕ್ಕೆ ಸಜ್ಜಾಗಿದೆ. ಆದರೆ ಎರಡನೇ ದಿನದಾಟ ವಿಳಂಭವಾಗಲಿದೆ. ಟ್ರೆಂಟ್ಬ್ರಿಡ್ಜ್ ಟೆಸ್ಟ್ ಪಂದ್ಯಕ್ಕೆ ಇದೀಗ ಮಳೆ ಅಡ್ಡಿಯಾಗಿದೆ.
ದ್ವಿತೀಯ ದಿನದಾಟ ತಡವಾಗಿ ಆರಂಭವಾಗಲಿದೆ. ಸದ್ಯ ತುಂತುರ ಮಳೆಯಿಂದಾಗಿ ಪಿಚ್ ಕವರ್ ಮಾಡಲಾಗಿದೆ. ಮಳ ಬಳಿಕ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ಮುಂದುವರಿಸಲಿದೆ. ಆದರೆ ಮಳೆಯಿಂದಾಗಿ ಪಿಚ್ ಬೌಲರ್ಗಳಿಗೆ ಹೆಚ್ಚು ನೆರವು ನೀಡೋ ಸಾಧ್ಯತೆ ಇದೆ.
ಮೊದಲ ದಿನದಾಟದಲ್ಲಿ ನಾಯಕ ವಿರಾಟ್ ಕೊಹ್ಲಿ 97 ರನ್ ಸಿಡಿಸಿದರೆ, ಅಜಿಂಕ್ಯ ರಹಾನೆ 81 ರನ್ ಕಾಣಿಕೆ ನೀಡಿದ್ದರು. ಈ ಮೂಲಕ ಭಾರತ 6 ವಿಕೆಟ್ ನಷ್ಟಕ್ಕೆ 307 ರನ್ ದಾಖಲಿಸಿತ್ತು. ಯುವ ಕ್ರಿಕಟಿಗ ರಿಷಭ್ ಪಂತ್ ಅಜೇಯ 22 ರನ್ ಸಿಡಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಆರಂಭಿಕ 2 ಪಂದ್ಯ ಸೋತಿರುವ ಟೀಂ ಇಂಡಿಯಾಗೆ ಇದೀಗ 3ನೇ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯ. ಈ ಪಂದ್ಯ ಗೆದ್ದು ಸರಣಿ ಉಳಿಸಿಕೊಳ್ಳಲು ವಿರಾಟ್ ಕೊಹ್ಲಿ ಸೈನ್ಯ ಕಠಿಣ ಹೋರಾಟ ನೀಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.