
ಎಡ್ಜ್ಬಾಸ್ಟನ್(ಆ.04): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಫಲಿತಾಂಶ ಇನ್ನೂ ನಿಗೂಢವಾಗಿದೆ. 8 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಭಾರತದ ಮೇಲೆ ಇಂಗ್ಲೆಂಡ್ ತಂಡ ಸ್ಲೆಡ್ಜಿಂಗ್ ಶುರು ಮಾಡಿದೆ.
ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದ ವಿರಾಟ್ ಕೊಹ್ಲಿ ವಿಕೆಟ್ ಕಬಳಿಸಿದ ಇಂಗ್ಲೆಂಡ್ ಇದೀಗ ಗೆಲುವಿನ ಆತ್ಮವಿಶ್ವಾಸದಲ್ಲಿದೆ. ಕೊಹ್ಲಿ ವಿಕೆಟ್ ಪತನದ ಬಳಿಕ ಬೆನ್ ಸ್ಟೋಕ್ಸ್, ಹಾರ್ದಿಕ್ ಪಾಂಡ್ಯ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ.
ಗೆಲುವಿಗಾಗಿ 194 ರನ್ ಟಾರ್ಗೆಟ್ ಪಡೆದಿದ್ದ ಟೀಂ ಇಂಡಿಯಾ 3ನೇ ದಿನದಾಟದ ಅಂತ್ಯದಲ್ಲಿ 5 ವಿಕೆಟ್ ನಷ್ಟಕ್ಕೆ 110 ರನ್ ಸಿಡಿಸಿತ್ತು. 4ನೇ ದಿನದಾಟ ಆರಂಭದಲ್ಲೇ ಟೀಂ ಇಂಡಿಯಾ ದಿನೇಶ್ ಕಾರ್ತಿಕ್ ವಿಕೆಟ್ ಕಳೆದುಕೊಂಡಿತು. ಬಳಿಕ ಕೊಹ್ಲಿ 51 ರನ್ ಸಿಡಿಸಿ ಔಟಾದರು. ಕೊಹ್ಲಿ ಬೆನ್ನಲ್ಲೇ ಮೊಹಮ್ಮದ್ ಶಮಿ ಕೂಡ ಪೆವಿಲಿಯನ್ ಸೇರಿಕೊಂಡರು. ಸದ್ಯ ಭಾರತ 8 ವಿಕೆಟ್ ನಷ್ಟಕ್ಕೆ 152 ರನ್ ಸಿಡಿಸಿದೆ. ಈ ಮೂಲಕ ಗೆಲುವಿಗೆ ಇನ್ನು 42 ರನ್ಗಳ ಅವಶ್ಯಕತೆ ಇದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.