
ಓವಲ್(ಸೆ.07): ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಟಾಸ್ ಪ್ರಕ್ರಿಯ ಮುಗಿದಿದೆ. ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಬದಲು, ಯುವ ಬ್ಯಾಟ್ಸ್ಮನ್ ಹನುಮಾ ವಿಹಾರಿ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ಇಂಜುರಿಗೆ ತುತ್ತಾಗಿರೋ ಆರ್ ಅಶ್ವಿನ್ ಬದಲು, ರವೀಂದ್ರ ಜಡೇಜಾಗೆ ಅವಕಾಶ ನೀಡಲಾಗಿದೆ. ಈ ಮೂಲಕ ಟೀಂ ಇಂಡಿಯಾ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.