
ಓವಲ್(ಸೆ.09): ಇಂಗ್ಲೆಂಡ್ ವಿರುದ್ದದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ತೃತೀಯ ದಿನ ಟೀಂ ಇಂಡಿಯಾ ದಿಟ್ಟ ಹೋರಾಟ ನೀಡೋ ಸೂಚನೆ ನೀಡಿದೆ. 6 ವಿಕೆಟ್ ನಷ್ಟಕ್ಕೆ 174 ರನ್ಗಳೊಂದಿಗೆ ದಿನದಾಟ ಆರಂಭಿಸಿದ ಭಾರತಕ್ಕೆ ರವೀಂದ್ರ ಜಡೇಜಾ ಹಾಗೂ ಹನುಮಾ ವಿಹಾರಿ ಆಸರೆಯಾಗಿದ್ದಾರೆ.
ದ್ವಿತೀಯ ದಿನ ಇಂಗ್ಲೆಂಡ್ ಬೌಲರ್ಗಳ ದಾಳಿಗೆ ಟೀಂ ಇಂಡಿಯಾ ತತ್ತರಿಸಿತು. ಆದರೆ 3ನೇ ದಿನದಾಟದಲ್ಲಿ ಹನುಮಾ ವಿಹಾರಿ ಹಾಗೂ ಜಡೇಜಾ ಅತ್ಯುತ್ತಮ ಜೊತೆಯಾಟ ನೀಡಿದ್ದಾರೆ. ಸದ್ಯ ಭಾರತ 6 ವಿಕೆಟ್ ನಷ್ಟಕ್ಕೆ 204 ರನ್ ಸಿಡಿಸಿದೆ. ಹನುಮಾ ವಿಹಾರಿ ಅಜೇಯ. 38 ಹಾಗೂ ಜಡೇಜಾ ಅಜೇಯ 24 ರನ್ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದಾರೆ.
ಮೊದಲ ದಿನ ಭಾರತ ಮೇಲುಗೈ ಸಾಧಿಸಿದರೆ, ದ್ವಿತೀಯ ದಿನ ಇಂಗ್ಲೆಂಡ್ ಬೌಲರ್ಗಳು ಪರಾಕ್ರಮ ಮೆರೆದಿದ್ದರು. 2ನೇ ದಿನ ಇಂಗ್ಲೆಂಡ್ ತಂಡವನ್ನ 332ರನ್ಗೆ ಆಲೌಟ್ ಮಾಡಿ ಭಾರತ ಮೊದಲ ಇನ್ನಿಂಗ್ಸ್ ಆರಂಭಿಸಿತು. ಆದರೆ ದಿನದಾಟದ ಅಂತ್ಯದಲ್ಲಿ ಭಾರತ 6 ವಿಕೆಟ್ ನಷ್ಟಕ್ಕೆ 174 ರನ್ ಸಿಡಿಸಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.