
ಚೆಲ್ಮ್ಸ್ಫೋರ್ಡ್(ಜು.25): ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಆರಂಭಿಕ ಆಘಾತ ಅನುಭವಿಸಿದ್ದ ಟೀಂ ಇಂಡಿಯಾ ಇದೀಗ ಚೇತರಿಸಿಕೊಂಡಿದೆ. ನಾಯಕ ವಿರಾಟ್ ಕೊಹ್ಲಿ ಹಾಗೂ ಮುರಳಿ ವಿಜಯ್ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದಾರೆ.
ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ಆರಂಭದಲ್ಲೇ ಶಿಖರ್ ಧವನ್ ಹಾಗೂ ಚೇತೇಶ್ವರ್ ಪೂಜಾರ ವಿಕೆಟ್ ಕಳೆದುಕೊಂಡಿತು. ಧವನ್ ಡಕೌಟ್ ಆದರೆ, ಪೂಜಾರ 1 ರನ್ ಸಿಡಿಸಿ ನಿರ್ಗಮಿಸಿದರು. ಅಜಿಂಕ್ಯ ರಹಾನೆ 17 ರನ್ ಸಿಡಿಸಿ ಔಟಾದರು.
ಮುರಳಿ ವಿಜಯ್ ಹಾಗೂ ನಾಯಕ ವಿರಾಟ್ ಕೊಹ್ಲಿ ಜೊತೆಯಾಟದಿಂದ ಟೀಂ ಇಂಡಿಯಾ ದಿಟ್ಟ ಹೋರಾಟ ನೀಡಿತು. ಕೊಹ್ಲಿ ಹಾಗೂ ವಿಜಯ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಈ ಮೂಲಕ ಟೀಂ ಇಂಡಿಯಾ ಇದೀಗ 147 ರನ್ ಗಡಿ ದಾಟಿತು.
ಹಾಫ್ ಸೆಂಚುರಿ ಸಿಡಿದ ಬೆನ್ನಲ್ಲೇ ಮುರಳಿ ವಿಜಯ್ ವಿಕೆಟ್ ಪತನಗೊಂಡಿತು. ವಿಜಯ್ 7 ಬೌಂಡರ್ ನೆರವಿನಿಂದ 53 ರನ್ ಸಿಡಿಸಿ ಔಟಾದರು. ಇದರೊಂದಿಗೆ ಭಾರತದ 4ನೇ ವಿಕೆಟ್ ಪತನಗೊಂಡಿತು.
ಆಗಸ್ಟ್ 1 ರಿಂದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆರಂಭವಾಗಲಿದೆ. ಹೀಗಾಗಿ ಇದಕ್ಕೂ ಮುನ್ನ ನಡೆಯುತ್ತಿರುವ ಅಭ್ಯಾಸ ಪಂದ್ಯವನ್ನ ನಾಲ್ಕು ದಿನದಿಂದ 3 ದಿನಕ್ಕೆ ಸೀಮಿತಗೊಳಿಸಲಾಗಿದೆ. ಕಳಪೆ ಗುಣಮಟ್ಟದ ಪಿತ್, ಹಾಗೂ ಮೈದಾನದಿಂದ ಟೀಂ ಇಂಡಿಯಾ ಅಸಮಧಾನ ವ್ಯಕ್ತಪಡಿಸಿತ್ತು. ಹೀಗಾಗಿ ಪಂದ್ಯವನ್ನ 4 ದಿನದಿಂದ 3 ದಿನಕ್ಕೆ ಸೀಮಿತಗೊಳಿಸಲಾಗಿದೆ.
ಇದನ್ನು ಓದಿ: 2017ರಲ್ಲಿ ದಾರಿಯಲ್ಲೇ ಮುಗಿಯುತ್ತಿತ್ತು ಗ್ಲೆನ್ ಮ್ಯಾಕ್ಸ್ವೆಲ್ ಕತೆ!
ಇದನ್ನು ಓದಿ: ವಿರಾಟ್ ಕೊಹ್ಲಿಯ ಪ್ರತಿ ಇನ್ಸ್ಟಾಗ್ರಾಂ ಪೋಸ್ಟ್ಗೆ ಕೊಡಬೇಕು 82 ಲಕ್ಷ ರೂಪಾಯಿ!
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.